Monday, December 15, 2025
Monday, December 15, 2025

ಪದ್ಮಶ್ರೀ ಪ್ರಶಸ್ತಿಗೆ ಸರ್ಕಾರದ ಶಿಫಾರಸು

Date:

ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸದಾಶಿವನಗರದ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಬೇಟಿ ನೀಡಿದ ಮುಖ್ಯಮಂತ್ರಿಗಳು “ಅಭಿಮಾನಿಗಳ ಆಶಯದಂತೆ ಅಪ್ಪು ಅವರಿಗೆ ಪದ್ಮಶ್ರೀ ನೀಡುವ ವಿಚಾರ ಸರ್ವಸಮ್ಮತವಾಗಿದೆ ” ಎಂದು ಹೇಳಿದರು.

ಪುನೀತ್ ರಾಜಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಸಮಯದಲ್ಲಿ ಬೊಮ್ಮಾಯಿಯವರು ಪುನೀತ್ ರಾಜಕುಮಾರ್ ಕನ್ನಡದ ಆಸ್ತಿ ಅವರನ್ನು ಕಳೆದುಕೊಂಡು ಎಂಟು ದಿನಗಳಾಗಿವೆ. ಪುನೀತ್ ಅವರು ಇಲ್ಲವಾಗಿರುವುದು ನಮ್ಮ ಪಾಲಿಗೆ ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಈ ರಾಜ್ಯದ ಜನತೆಯ ಪುನೀತ್ ಕುಟುಂಬದೊಂದಿಗೆ ಇದೆ ಎಂದು ಹೇಳಿದರು.ರಾಜ್ಯ ಸರ್ಕಾರ ಪುನೀತ್ ಅವರ ಅಂತ್ಯಕ್ರಿಯೆಯನ್ನು ಅತ್ಯಂತ ಪ್ರೀತಿ-ಗೌರವ, ಆತ್ಮೀಯತೆಯಿಂದ ಹಾಗೂ ಭಾವನಾತ್ಮಕವಾಗಿ ನಡೆಸಿಕೊಟ್ಟಿರುವುದಕ್ಕಾಗಿ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನವೆಂಬರ್ 16ರಂದು ಹಮ್ಮಿಕೊಂಡಿರುವ ‘ಪುನೀತ ತಮ್ಮನ’ ಕಾರ್ಯಕ್ರಮಕ್ಕೆ ಅಗತ್ಯ ಭದ್ರತೆ ಕಲ್ಪಿಸಲಾಗುವುದು ಎಂದರು. ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್ ಹಾಗೂ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...