Saturday, July 18, 2026
Saturday, July 18, 2026

ಪದ್ಮಶ್ರೀ ಪ್ರಶಸ್ತಿಗೆ ಸರ್ಕಾರದ ಶಿಫಾರಸು

Date:

ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸದಾಶಿವನಗರದ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಬೇಟಿ ನೀಡಿದ ಮುಖ್ಯಮಂತ್ರಿಗಳು “ಅಭಿಮಾನಿಗಳ ಆಶಯದಂತೆ ಅಪ್ಪು ಅವರಿಗೆ ಪದ್ಮಶ್ರೀ ನೀಡುವ ವಿಚಾರ ಸರ್ವಸಮ್ಮತವಾಗಿದೆ ” ಎಂದು ಹೇಳಿದರು.

ಪುನೀತ್ ರಾಜಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಸಮಯದಲ್ಲಿ ಬೊಮ್ಮಾಯಿಯವರು ಪುನೀತ್ ರಾಜಕುಮಾರ್ ಕನ್ನಡದ ಆಸ್ತಿ ಅವರನ್ನು ಕಳೆದುಕೊಂಡು ಎಂಟು ದಿನಗಳಾಗಿವೆ. ಪುನೀತ್ ಅವರು ಇಲ್ಲವಾಗಿರುವುದು ನಮ್ಮ ಪಾಲಿಗೆ ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಈ ರಾಜ್ಯದ ಜನತೆಯ ಪುನೀತ್ ಕುಟುಂಬದೊಂದಿಗೆ ಇದೆ ಎಂದು ಹೇಳಿದರು.ರಾಜ್ಯ ಸರ್ಕಾರ ಪುನೀತ್ ಅವರ ಅಂತ್ಯಕ್ರಿಯೆಯನ್ನು ಅತ್ಯಂತ ಪ್ರೀತಿ-ಗೌರವ, ಆತ್ಮೀಯತೆಯಿಂದ ಹಾಗೂ ಭಾವನಾತ್ಮಕವಾಗಿ ನಡೆಸಿಕೊಟ್ಟಿರುವುದಕ್ಕಾಗಿ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನವೆಂಬರ್ 16ರಂದು ಹಮ್ಮಿಕೊಂಡಿರುವ ‘ಪುನೀತ ತಮ್ಮನ’ ಕಾರ್ಯಕ್ರಮಕ್ಕೆ ಅಗತ್ಯ ಭದ್ರತೆ ಕಲ್ಪಿಸಲಾಗುವುದು ಎಂದರು. ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್ ಹಾಗೂ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...