Sunday, March 23, 2025
Sunday, March 23, 2025

ಪದ್ಮಶ್ರೀ ಪ್ರಶಸ್ತಿಗೆ ಸರ್ಕಾರದ ಶಿಫಾರಸು

Date:

ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸದಾಶಿವನಗರದ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಬೇಟಿ ನೀಡಿದ ಮುಖ್ಯಮಂತ್ರಿಗಳು “ಅಭಿಮಾನಿಗಳ ಆಶಯದಂತೆ ಅಪ್ಪು ಅವರಿಗೆ ಪದ್ಮಶ್ರೀ ನೀಡುವ ವಿಚಾರ ಸರ್ವಸಮ್ಮತವಾಗಿದೆ ” ಎಂದು ಹೇಳಿದರು.

ಪುನೀತ್ ರಾಜಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಸಮಯದಲ್ಲಿ ಬೊಮ್ಮಾಯಿಯವರು ಪುನೀತ್ ರಾಜಕುಮಾರ್ ಕನ್ನಡದ ಆಸ್ತಿ ಅವರನ್ನು ಕಳೆದುಕೊಂಡು ಎಂಟು ದಿನಗಳಾಗಿವೆ. ಪುನೀತ್ ಅವರು ಇಲ್ಲವಾಗಿರುವುದು ನಮ್ಮ ಪಾಲಿಗೆ ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಈ ರಾಜ್ಯದ ಜನತೆಯ ಪುನೀತ್ ಕುಟುಂಬದೊಂದಿಗೆ ಇದೆ ಎಂದು ಹೇಳಿದರು.ರಾಜ್ಯ ಸರ್ಕಾರ ಪುನೀತ್ ಅವರ ಅಂತ್ಯಕ್ರಿಯೆಯನ್ನು ಅತ್ಯಂತ ಪ್ರೀತಿ-ಗೌರವ, ಆತ್ಮೀಯತೆಯಿಂದ ಹಾಗೂ ಭಾವನಾತ್ಮಕವಾಗಿ ನಡೆಸಿಕೊಟ್ಟಿರುವುದಕ್ಕಾಗಿ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನವೆಂಬರ್ 16ರಂದು ಹಮ್ಮಿಕೊಂಡಿರುವ ‘ಪುನೀತ ತಮ್ಮನ’ ಕಾರ್ಯಕ್ರಮಕ್ಕೆ ಅಗತ್ಯ ಭದ್ರತೆ ಕಲ್ಪಿಸಲಾಗುವುದು ಎಂದರು. ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್ ಹಾಗೂ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Thawar Chand Gehlot ರಾಜಭವನದಲ್ಲಿ ಸಂಭ್ರಮಿಸಿದ “ಚಂದನ” ದ ಚೈತ್ರಾಂಜಲಿ, ಯುಗಾದಿ ಶುಭಾಶಯ ಕೋರಿದ ರಾಜ್ಯಪಾಲ‌ ಗೆಹ್ಲೋಟ್

Thawar Chand Gehlot ಬೆಂಗಳೂರು 22.03.2025: ಹಿಂದುಗಳ ಹೊಸ ವರ್ಷವೆಂದೇ ಕರೆಯಲ್ಪಡುವ...

PM Yoga Awards ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ...

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...