Sunday, July 26, 2026
Sunday, July 26, 2026

ದಯವಿಟ್ಟು ಆತ್ಮಹತ್ಯೆಗೆ ಮುಂದಾಗದಿರಿ.

Date:

ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡಿಕೊಳ್ತೇನೆ.ಅಭಿಮಾನಿ ದೇವರುಗಳು ಅಂತ ಅಪ್ಪಾಜಿ ನಿಮ್ಮನ್ನ ಕರೀತಿದ್ದರು. ಈಗಾಗಲೇ ನಮ್ಮ ಕುಟುಂಬ ನೋವಿನಲ್ಲಿದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಅಂತ ರಾಘವೇಂದ್ರ ರಾಜ್ ಕುಮಾರ್ ಅತ್ಯಂತ ಕಳಕಳಿಯ ಮನವಿ ಮಾಡಿದ್ದಾರೆ.
ನಿಜ.ಹೋದ ಜೀವ ಮತ್ತೆ ಬಾರದು. ಹಾಗೇ ಜೀವ ಕಳೆದುಕೊಂಡರೂ ಅದು ಜೀವಕ್ಕೆ ಜೀವ ಕೊಟ್ಟಂತಾಗುವುದಿಲ್ಲ. ಅಭಿಮಾನ ತೋರಿಸಬೇಕು. ಆದರೆ ಪ್ರಾಣತ್ಯಾಗದಿಂದ ಅಲ್ಲ. ವ್ಯಕ್ತಿಯ ಆದರ್ಶಗಳನ್ನ ಪಾಲಿಸಿದರೆ ಸಾಕು ಅದೇ ಅಪ್ಟಟ ಪ್ರೀತಿ.

ಈಗ ಹಲವಾರು ಕ್ಷೇತ್ರದ ನಾಯಕರು ಅಪ್ಪು ವಿನ ಸಾಮಾಜಿಕ ಕಳಕಳಿ ಮೆಚ್ಚಿದ್ದಾರೆ.ಜೊತೆಗೆ ನೆರವು ನೀಡಿ,ಹೊಣೆಹೊರುವುದಾಗಿಯೂ ಹೇಳಿದ್ದಾರೆ.ಇದು ನೈಜ ಸೇವೆ. ಪುನೀತರ ಆತ್ಮಕ್ಕೂ ಶಾಂತಿ ತರುವ ಕೆಲಸವಾಗುತ್ತದೆ.

ಗೋಶಾಲೆ, ಅನಾಥಾಶ್ರಮ,
ವೃದ್ಧಾಶ್ರಮ, ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೆರವು ,ನಿರ್ಗತಿಕರಿಗೆ ಆಶ್ರಯ , ಬಡಮಕ್ಕಳಿಗೆ ಓದಲು ಸಹಾಯ ಹೀಗೆ ಹಲವು ಕ್ಷೇತ್ರಗಳಿವೆ. ಇಂತಹವುಗಳ ಬಗ್ಗೆ ನಮ್ಮ ಅಭಿಮಾನ ವ್ಯಕ್ತಪಡಿಸಬೇಕು. ಅವುಗಳಿಗೆ ನಿಧಿ ಕೂಡಿಸಿ ಬೆಳೆಸಬೇಕು.ಇವತ್ತು ಎಷ್ಟು ಊರುಗಳಲ್ಲಿ ಇಂತಹವುಗಳ ಅಗತ್ಯವಿದೆ? ಬಹಳ ಜರೂರು ಈ ಕುರಿತು ಅಭಿಮಾನಿಗಳು ಸಂಘಟಿತರಾದರೆ ಪುನೀತರ ಆತ್ಮಕ್ಕೆ ಶಾಂತಿ ದೊರಕುತ್ತದೆ.
”ಅಪ್ಪು, ನೀನು ಇನ್ನು ಅಭಿಮಾನಿಗಳಲ್ಲಿಯೇ ಬದುಕುತ್ತಿದೀಯಾ ಎಂಬ ಭಾವನೆ ನನಗೆ ಕಂದ.’ ದೇವರನ್ನು ಪೂಜಿಸುವ ಜಾಗದಲ್ಲಿ ಅಪ್ಪುವಿಗೆ ಕೊಟ್ಟಿರುವ ಈ ಸ್ಥಾನಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು.ಈ ಸಂದರ್ಭದಲ್ಲಿ ಇಂತಹ ಕಾರ್ಯಗಳಿಂದ ನಮಗೆ ಇನ್ನಷ್ಟು ಶಕ್ತಿ ತುಂಬುವ ನಮ್ಮ ನೆಚ್ಚಿನ ಅಭಿಮಾನಿ ದೇವರುಗಳಿಗೆ ನನ್ನ ವಂದನೆಗಳು.- ನಿಮ್ಮ ರಾಘಣ್ಣ” ಎಂದು ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.

Shivamogga News ದಾವಣಗೆರೆ.ಜು. 24. ಆರ್ಥಿಕ ಶಿಸ್ತು ಮಹಿಳೆಯರಲ್ಲಿ ತುಸು ಹೆಚ್ಚು,...

Gruhalakshmi Yojana ಗೃಹಲಕ್ಷ್ಮಿ ಯೋಜನೆ ನವೀಕರಣ: ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ. ಜನರು ಸಹಕರಿಸಿ- ಹೆಚ್.ಎಂ.ಮಧು.

Gruhalakshmi Yojana ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಗೃಹಲಕ್ಷಿö್ಮ ಯೋಜನೆಯಡಿ...

Canara Bank ಹೊಳಲೂರಿನ ಸಿಬಿಆರ್ ಎಸ್ಇಟಿಐ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಮತ್ತು ಉದ್ಯಮಶೀಲತಾ ಕಾರ್ಯಕ್ರಮ.

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ...

World Environment Day ಜನ್ಮದಿನಾಚರಣೆಗೆ ಕೇಕ್ ಕತ್ತರಿಸಬೇಡಿ.ಒಂದು ಗಿಡ ನೆಡಿ- ಡಾ. ನಾಗರಾಜ್. ‌ಪರಿಸರ

World Environment Day ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ವತಿಯಿಂದ...