Wednesday, July 8, 2026
Wednesday, July 8, 2026

ಧಾರಾಕಾರ ಮಳೆ: ಚೆನ್ನೈ ಜಲಾವೃತ

Date:

ಚೆನ್ನೈ ಮತ್ತು ಹೊರವಲಯದ ಪ್ರದೇಶಗಳಲ್ಲಿ ಕಳೆದ ಒಂದೆರಡು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದು, ಇದರಿಂದ ಚೆನ್ನೈ ನಗರ ಜಲಾವೃತಗೊಂಡಿದೆ.

2015ರ ಪ್ರವಾಹದ ಕರಾಳ ನೆನಪನ್ನು ಮರುಕಳಿಸಿದೆ. ತಮಿಳುನಾಡುಅತಿ ಹೆಚ್ಚು ಮಳೆಯಾಗಿರುವುದು ಚೆನ್ನೈನಲ್ಲಿ. ಎರಡರಿಂದ ಮೂರು ಅಡಿಗಳಷ್ಟು ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೂ ತೊಡಕುಂಟಾಗಿತ್ತು. ರೈಲು ಹಳಿಗಳ ಮೇಲೆ ಭಾರಿ ಪ್ರಮಾಣದ ನೀರು ನಿಂತಿರುವುದರಿಂದ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ವಿಮಾನದ ಹಾರಾಟವು ಸಹ ವ್ಯತ್ಯಯಗೊಂಡಿದೆ. ಮಳೆಯಲ್ಲಿ ಸಿಲುಕಿಕೊಂಡಿದ್ದ 81 ಜನರನ್ನು ರಕ್ಷಿಸಲಾಗಿದೆ. ಚೆನ್ನೈ ನಗರಕ್ಕೆ ಕುಡಿಯುವ ನೀರನ್ನು ಪೂರೈಸುತ್ತಿರುವ ಪ್ರಮುಖ ಮೂಲಗಳಾದ ಚೆಂಬರಂಬಕ್ಕಮ್ ಮತ್ತು ,ಪುಝಲ್ ಜಲಾಶಯಗಳಿಂದ ನೀರು ಹೊರಬಿಡಲಾಗಿದೆ.
ನಿನ್ನೆ ರಾತ್ರಿ ಚೆಂಬರಂಬಕ್ಕಮ್ ನಿಂದ 2000 ಕ್ಯೂಸೆಕ್ಸ್ ನೀರು ಹೊರಬಿಡಲಾಗಿದೆ. ಗ್ರೇಟರ್ ಚೆನ್ನೈ ಮಹಾನಗರಪಾಲಿಕೆಯು 160 ಪುನರ್ವಸತಿ ಕೇಂದ್ರ ಆರಂಭಿಸಿದೆ.

ಚೆನ್ನೈ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಶೀಘ್ರ ಕೈಗೊಳ್ಳುವಂತೆ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ರಾಜ್ಯದ ಸಂಸದರು ಮತ್ತು ಶಾಸಕರು ಪರಿಹಾರ ಕಾರ್ಯಗಳಲ್ಲಿ ಕೈಜೋಡಿಸಬೇಕು. ಮತ್ತು ದೀಪಾವಳಿಗಾಗಿ ಊರಿಗೆ ತೆರಳಿರುವ ಜನರು ಇನ್ನೂ ಮೂರುದಿನ ಚೆನ್ನೈಗೆ ಮರುಕಳಿಸುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...