Wednesday, October 2, 2024
Wednesday, October 2, 2024

ಸಮಾಜ ಸೇವೆಗೆ ಸ್ಪೂರ್ತಿ- ಪುನೀತ್

Date:

ಪುನೀತ್ ಅವರು 46 ವರ್ಷಗಳ ಕಾಲ ಬದುಕಿದ್ದರು ಅವರು ಮಾಡಿದ ಸಾಧನೆ ಬಹುದೊಡ್ಡದು. ಅನೇಕ ಸದಭಿರುಚಿ ಸಿನಿಮಾಗಳನ್ನು ನೀಡುವ ಮೂಲಕ ಅಭಿಮಾನಿಗಳ ಹೃದಯಗಳಲ್ಲಿ ಮನೆ ಮಾಡಿದ್ದಾರೆ. ಅವರು ತಮ್ಮ ಜೀವನದಲ್ಲಿ ರೂಡಿಸಿಕೊಂಡಿದ್ದ ಮೌಲ್ಯಗಳು ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ಶಿವಮೊಗ್ಗ ಬಸವ ಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅವರು ಹೇಳಿದ್ದಾರೆ.
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ “ಅಪ್ಪು- ಅಮರ ಪುನೀತ್ ರಾಜಕುಮಾರ್”ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಪ್ಪು ಅಭಿಮಾನಿಗಳ ಹೃದಯದಲ್ಲಿ ಈಗಲೂ ಚಿರಸ್ಥಾಯಿಯಾಗಿದ್ದಾರೆ. ಇದಕ್ಕೆ ಕಾರಣ ಅವರ ಪರಿಪೂರ್ಣ ವ್ಯಕ್ತಿತ್ವ ಎಂದು ಅವರು ತಿಳಿಸಿದರು.
ಎಂಡೋಸಲ್ಫಾನ್ ಸಂತ್ರಸ್ತರ ಪರ ದನಿಯತ್ತಿದ್ದರು.ಆ ಮೂಲಕ ಪುನೀತ್ ಅವರು ಸರ್ಕಾರ ಮತ್ತು ಸಂಬಂಧಪಟ್ಟ ಕಂಪನಿಯವರು ಪರಿಹಾರ ನೀಡುವಷ್ಟರ ಮಟ್ಟಿಗೆ ಹೋರಾಟವನ್ನು ರೂಪಿಸಿದ್ದರು. ಇದು ಅವರಲ್ಲಿ ಸಮಾಜದ ಪರವಾಗಿದ್ದ ಬದ್ಧತೆಯ ಪ್ರತೀಕ ಎಂದರು.
ಕಾರ್ಯಕ್ರಮದಲ್ಲಿ ಗೋಣಿಬೀಡು ಶೀಲ ಸಂಪಾದನಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸಾನಿಧ್ಯ ವಹಿಸಿದ್ದರು.
ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರು ತಮ್ಮ ಗಾಯನದ ಮೂಲಕ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸಿದರು. ಗಾಯಕರಾದ ಋತ್ವಿಕ್ ಮುರುಳಿಧರ್, ಗಾಯಕಿ ವಿದುಷಿ ಸುರೇಖಾ ಹೆಗಡೆ, ಚಾರ್ವಿ ಮುರುಳಿಧರ್, ಎಸ್.ಪಿ. ವಿಶಾಲ್, ಸೂಡಾ ಮಾಜಿ ಅಧ್ಯಕ್ಷ ರಮೇಶ್, ಸದ್ಭಾವನಾ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ್, ನಿರ್ಮಲಾ ಕಾಶಿ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...