Saturday, April 4, 2026
Saturday, April 4, 2026

ಡಿ:12 ರೈಲ್ವೆ ‘ರಾಮಾಯಣ ಯಾತ್ರೆ’

Date:

ದೇಶದಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆರಂಭಿಸಿರುವ ‘ರಾಮಾಯಣ ಯಾತ್ರೆ’ಗೆ ವಿಧ್ಯುಕ್ತ ಚಾಲನೆ ನೀಡಲಾಗಿದೆ. ದಿಲ್ಲಿಯ
ಸಫ್ದರ್ ಜಂಗ್ ನಿಲ್ದಾಣದಿಂದ ಸಂಜೆ 6:30ಕ್ಕೆ ಪ್ರಯಾಣ ಆರಂಭಿಸಿದ ಐಷಾರಾಮಿ ಹವಾನಿಯಂತ್ರಿತ ರೈಲು, 17 ದಿನಗಳ ಬಳಿಕ ಸಫ್ದರ್ ಜಂಗ್ ನಿಲ್ದಾಣಕ್ಕೆ ಮರಳಲಿದೆ. ಉತ್ತರ ಪ್ರದೇಶದ ಅಯೋಧ್ಯೆ ಯಲ್ಲಿ ರೈಲು ಮೊದಲ ನಿಲುಗಡೆ ಹೊಂದಿದೆ. ‘ದೇಖೋ ಅಪ್ನಾ ದೇಶ್’ (ನಮ್ಮ ದೇಶ ನೋಡಿ) ಅಭಿಯಾನದ ಅಡಿಯಲ್ಲಿ ಐಆರ್ ಸಿಟಿಯು ಈ ಪ್ಯಾಕೇಜ್ ಯಾತ್ರೆ ಆರಂಭಿಸಿದೆ.
ಹವಾನಿಯಂತ್ರಿತ ರೈಲಿನಲ್ಲಿ ‘ರಾಮಾಯಣ ಯಾತ್ರೆ’ ಕೈಗೊಳ್ಳುವ ಪ್ರಯಾಣಿಕರು ಕೊರೊನಾ ನಿರೋಧಕ ಲಸಿಕೆಯ ಎರಡೂ ಡೋಸ್ ಹಾಕಿಸಿಕೊಂಡಿರಬೇಕು. 18 ವರ್ಷ ಮೇಲ್ಪಟ್ಟವರು ಮಾತ್ರ ಪ್ರಯಾಣ ಕೈಗೊಳ್ಳಬಹುದು ಎಂಬ ನಿಯಮಗಳನ್ನು ವಿಧಿಸಲಾಗಿದೆ.
ಎರಡು ಅತ್ಯಾಧುನಿಕ ರೆಸ್ಟೋರೆಂಟ್ ಗಳನ್ನು ರೈಲು ಹೊಂದಿದೆ. ಅಯೋಧ್ಯೆ, ಜನಕಪುರ, ಸೀತಾಮಂಡಿ, ಕಾಶಿ, ಪ್ರಯಾಗ್ ರಾಜ್, ಚಿತ್ರಕೂಟ, ನಾಸಿಕ್, ಹಂಪಿ, ರಾಮೇಶ್ವರ ಸೇರಿದಂತೆ ಶ್ರೀರಾಮನಿಗೆ ಸಂಬಂಧಿಸಿದ ಪ್ರಮುಖ ಕ್ಷೇತ್ರಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಎರಡನೆಯ ಸಂಚಾರವು ಡಿಸೆಂಬರ್ 12 ರಿಂದ ಆರಂಭವಾಗಲಿದೆ. ಅಯೋಧ್ಯೆಯು ಈ ಯಾತ್ರೆಯ ಮೊದಲ ಕ್ಷೇತ್ರವಾದರೆ, ರಾಮೇಶ್ವರ ಕೊನೆಯ ಕ್ಷೇತ್ರವಾಗಿದೆ ಎಂಬ ಮಾಹಿತಿ ದೊರೆತಿದೆ.
ರೈಲ್ವೆ ಇಲಾಖೆ ತಿಳಿಸಿರುವ ಪ್ರಯಾಣ ದರ ಹೀಗಿದೆ – ಪ್ರತಿ ಪ್ರಯಾಣಿಕರಿಗೆ
82,950ರೂ. -2ಎಸಿ.
1,02,095ರೂ.- 1ಎಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...