Saturday, April 4, 2026
Saturday, April 4, 2026

ಮಾಲಿನ್ಯಯುಕ್ತ ದೆಹಲಿ, ಕೋವಿಡ್ ಆತಂಕದಲ್ಲಿ

Date:

ದೀಪಾವಳಿ ಹಿನ್ನೆಲೆಯಲ್ಲಿ, ದೇಶದ ಹಲವು ನಗರಗಳಲ್ಲಿ ಮಿತಿಮೀರಿದ ವಾಯು ಮಾಲಿನ್ಯದಿಂದ ಕೋವಿಡ್ ಸಂಖ್ಯೆ ಹೆಚ್ಚಳವಾಗುವ ಕಾರಣದ ಬಗ್ಗೆ ವೈದ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.

ಚಳಿಗಾಲ, ವಿಷಗಾಳಿ ಮತ್ತು ಕೋರೋನಾ ಬಾಧೆಗಳಿಂದ ದೇಶದಾದ್ಯಂತ ಶ್ವಾಸ ಸಂಬಂಧಿತ ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವ ಆತಂಕವನ್ನು ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ವ್ಯಕ್ತಪಡಿಸಿದ್ದಾರೆ.
“ಹಲವು ಜನರಲ್ಲಿ ಅಲರ್ಜಿಯ ಕೆಮ್ಮು, ಅಸ್ತಮಾ, ಸಿ.ಓ.ಪಿ.ಡಿ ಮತ್ತು ಇತರ ಶ್ವಾಸಕೋಶ ಸಂಬಂಧಿತ ಅನಾರೋಗ್ಯಗಳು ಗೌಪ್ಯವಾಗಿರುತ್ತದೆ. ಹೊರಗಿನ ವಾತಾವರಣದ ಪ್ರೇರಣೆ ಮೇಲೆ ಸಮಸ್ಯೆಗಳು ಉದ್ಭವಿಸಿ ಕೊಂಡು ಜನರನ್ನು ಬಾಧಿಸಲಾರಂಭಿಸುತ್ತದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ನೈಜುಲೇಜರ್ ಅಥವಾ ಇನ್ಹೇಲರ್ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ರೀತಿ ದುರ್ಬಲ ಶ್ವಾಸಕೋಶ ಹೊಂದಿರುವವರಿಗೆ ಕೋರೋನಾ ಸೋಂಕು ತಗಲಿ ಮರಣ ಹೊಂದುವ ಅಪಾಯ ಹೆಚ್ಚಿದೆ” ಎಂದು ಗುಲೇರಿಯಾ ತಿಳಿಸಿದ್ದಾರೆ.

ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ವಾಯುಮಾಲಿನ್ಯ ಮಿತಿಮೀರಿದ ಸಂದರ್ಭದಲ್ಲಿ, ಮೊದಲಿಗೆ ಮಕ್ಕಳು ತೊಂದರೆಗೊಳಗಾಗುತ್ತಾರೆ. ಚಿಕಿತ್ಸೆ ವಾರ್ಡಗಳಿಗೆ ಹೆಚ್ಚು ಪ್ರಮಾಣದಲ್ಲಿ ಮಕ್ಕಳು ಉಸಿರಾಟ ಸಮಸ್ಯೆ, ದೀರ್ಘಕಾಲದ ಶೀತ -ಕೆಮ್ಮು ಸಮಸ್ಯೆಗಳಿಂದಾಗಿ ದಾಖಲಾಗುತ್ತಾರೆ. ಹೀಗಾಗಿ ಮಕ್ಕಳು ಹೆಚ್ಚು ಜಾಗೃತರಾಗಿರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬೆಳಿಗ್ಗಿನ ವೇಳೆಯಲ್ಲಿ ವಾಹನದ ಓಡಾಟ ಹೆಚ್ಚಾಗಿರುವ ಕಾರಣ ಜನರ ಓಡಾಟ ಕಡಿಮೆಗೊಳಿಸುವುದು ಉತ್ತಮ ಎಂದು ಗುಲೇರಿಯಾ ಅವರು ಸುದ್ದಿ ಸಂಸ್ಥೆಯೊಂದರ ಸಂದರ್ಶನದಲ್ಲಿ ತಿಳಿಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...