Saturday, July 11, 2026
Saturday, July 11, 2026

ಮಾಲಿನ್ಯಯುಕ್ತ ದೆಹಲಿ, ಕೋವಿಡ್ ಆತಂಕದಲ್ಲಿ

Date:

ದೀಪಾವಳಿ ಹಿನ್ನೆಲೆಯಲ್ಲಿ, ದೇಶದ ಹಲವು ನಗರಗಳಲ್ಲಿ ಮಿತಿಮೀರಿದ ವಾಯು ಮಾಲಿನ್ಯದಿಂದ ಕೋವಿಡ್ ಸಂಖ್ಯೆ ಹೆಚ್ಚಳವಾಗುವ ಕಾರಣದ ಬಗ್ಗೆ ವೈದ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.

ಚಳಿಗಾಲ, ವಿಷಗಾಳಿ ಮತ್ತು ಕೋರೋನಾ ಬಾಧೆಗಳಿಂದ ದೇಶದಾದ್ಯಂತ ಶ್ವಾಸ ಸಂಬಂಧಿತ ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವ ಆತಂಕವನ್ನು ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ವ್ಯಕ್ತಪಡಿಸಿದ್ದಾರೆ.
“ಹಲವು ಜನರಲ್ಲಿ ಅಲರ್ಜಿಯ ಕೆಮ್ಮು, ಅಸ್ತಮಾ, ಸಿ.ಓ.ಪಿ.ಡಿ ಮತ್ತು ಇತರ ಶ್ವಾಸಕೋಶ ಸಂಬಂಧಿತ ಅನಾರೋಗ್ಯಗಳು ಗೌಪ್ಯವಾಗಿರುತ್ತದೆ. ಹೊರಗಿನ ವಾತಾವರಣದ ಪ್ರೇರಣೆ ಮೇಲೆ ಸಮಸ್ಯೆಗಳು ಉದ್ಭವಿಸಿ ಕೊಂಡು ಜನರನ್ನು ಬಾಧಿಸಲಾರಂಭಿಸುತ್ತದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ನೈಜುಲೇಜರ್ ಅಥವಾ ಇನ್ಹೇಲರ್ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ರೀತಿ ದುರ್ಬಲ ಶ್ವಾಸಕೋಶ ಹೊಂದಿರುವವರಿಗೆ ಕೋರೋನಾ ಸೋಂಕು ತಗಲಿ ಮರಣ ಹೊಂದುವ ಅಪಾಯ ಹೆಚ್ಚಿದೆ” ಎಂದು ಗುಲೇರಿಯಾ ತಿಳಿಸಿದ್ದಾರೆ.

ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ವಾಯುಮಾಲಿನ್ಯ ಮಿತಿಮೀರಿದ ಸಂದರ್ಭದಲ್ಲಿ, ಮೊದಲಿಗೆ ಮಕ್ಕಳು ತೊಂದರೆಗೊಳಗಾಗುತ್ತಾರೆ. ಚಿಕಿತ್ಸೆ ವಾರ್ಡಗಳಿಗೆ ಹೆಚ್ಚು ಪ್ರಮಾಣದಲ್ಲಿ ಮಕ್ಕಳು ಉಸಿರಾಟ ಸಮಸ್ಯೆ, ದೀರ್ಘಕಾಲದ ಶೀತ -ಕೆಮ್ಮು ಸಮಸ್ಯೆಗಳಿಂದಾಗಿ ದಾಖಲಾಗುತ್ತಾರೆ. ಹೀಗಾಗಿ ಮಕ್ಕಳು ಹೆಚ್ಚು ಜಾಗೃತರಾಗಿರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬೆಳಿಗ್ಗಿನ ವೇಳೆಯಲ್ಲಿ ವಾಹನದ ಓಡಾಟ ಹೆಚ್ಚಾಗಿರುವ ಕಾರಣ ಜನರ ಓಡಾಟ ಕಡಿಮೆಗೊಳಿಸುವುದು ಉತ್ತಮ ಎಂದು ಗುಲೇರಿಯಾ ಅವರು ಸುದ್ದಿ ಸಂಸ್ಥೆಯೊಂದರ ಸಂದರ್ಶನದಲ್ಲಿ ತಿಳಿಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...