Sunday, August 23, 2026
Sunday, August 23, 2026

ಮಾಲಿನ್ಯಯುಕ್ತ ದೆಹಲಿ, ಕೋವಿಡ್ ಆತಂಕದಲ್ಲಿ

Date:

ದೀಪಾವಳಿ ಹಿನ್ನೆಲೆಯಲ್ಲಿ, ದೇಶದ ಹಲವು ನಗರಗಳಲ್ಲಿ ಮಿತಿಮೀರಿದ ವಾಯು ಮಾಲಿನ್ಯದಿಂದ ಕೋವಿಡ್ ಸಂಖ್ಯೆ ಹೆಚ್ಚಳವಾಗುವ ಕಾರಣದ ಬಗ್ಗೆ ವೈದ್ಯರು ಎಚ್ಚರಿಕೆಯನ್ನು ನೀಡಿದ್ದಾರೆ.

ಚಳಿಗಾಲ, ವಿಷಗಾಳಿ ಮತ್ತು ಕೋರೋನಾ ಬಾಧೆಗಳಿಂದ ದೇಶದಾದ್ಯಂತ ಶ್ವಾಸ ಸಂಬಂಧಿತ ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವ ಆತಂಕವನ್ನು ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ವ್ಯಕ್ತಪಡಿಸಿದ್ದಾರೆ.
“ಹಲವು ಜನರಲ್ಲಿ ಅಲರ್ಜಿಯ ಕೆಮ್ಮು, ಅಸ್ತಮಾ, ಸಿ.ಓ.ಪಿ.ಡಿ ಮತ್ತು ಇತರ ಶ್ವಾಸಕೋಶ ಸಂಬಂಧಿತ ಅನಾರೋಗ್ಯಗಳು ಗೌಪ್ಯವಾಗಿರುತ್ತದೆ. ಹೊರಗಿನ ವಾತಾವರಣದ ಪ್ರೇರಣೆ ಮೇಲೆ ಸಮಸ್ಯೆಗಳು ಉದ್ಭವಿಸಿ ಕೊಂಡು ಜನರನ್ನು ಬಾಧಿಸಲಾರಂಭಿಸುತ್ತದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ನೈಜುಲೇಜರ್ ಅಥವಾ ಇನ್ಹೇಲರ್ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ರೀತಿ ದುರ್ಬಲ ಶ್ವಾಸಕೋಶ ಹೊಂದಿರುವವರಿಗೆ ಕೋರೋನಾ ಸೋಂಕು ತಗಲಿ ಮರಣ ಹೊಂದುವ ಅಪಾಯ ಹೆಚ್ಚಿದೆ” ಎಂದು ಗುಲೇರಿಯಾ ತಿಳಿಸಿದ್ದಾರೆ.

ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ವಾಯುಮಾಲಿನ್ಯ ಮಿತಿಮೀರಿದ ಸಂದರ್ಭದಲ್ಲಿ, ಮೊದಲಿಗೆ ಮಕ್ಕಳು ತೊಂದರೆಗೊಳಗಾಗುತ್ತಾರೆ. ಚಿಕಿತ್ಸೆ ವಾರ್ಡಗಳಿಗೆ ಹೆಚ್ಚು ಪ್ರಮಾಣದಲ್ಲಿ ಮಕ್ಕಳು ಉಸಿರಾಟ ಸಮಸ್ಯೆ, ದೀರ್ಘಕಾಲದ ಶೀತ -ಕೆಮ್ಮು ಸಮಸ್ಯೆಗಳಿಂದಾಗಿ ದಾಖಲಾಗುತ್ತಾರೆ. ಹೀಗಾಗಿ ಮಕ್ಕಳು ಹೆಚ್ಚು ಜಾಗೃತರಾಗಿರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬೆಳಿಗ್ಗಿನ ವೇಳೆಯಲ್ಲಿ ವಾಹನದ ಓಡಾಟ ಹೆಚ್ಚಾಗಿರುವ ಕಾರಣ ಜನರ ಓಡಾಟ ಕಡಿಮೆಗೊಳಿಸುವುದು ಉತ್ತಮ ಎಂದು ಗುಲೇರಿಯಾ ಅವರು ಸುದ್ದಿ ಸಂಸ್ಥೆಯೊಂದರ ಸಂದರ್ಶನದಲ್ಲಿ ತಿಳಿಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...