Friday, June 20, 2025
Friday, June 20, 2025

ಟಿ – 20 ವಿಶ್ವಕಪ್ ಕನಸು ನನಸಾಗದೇ ತವರಿಗೆ ವಾಪಸ್ಸು

Date:

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ B – ಗುಂಪಿನಲ್ಲಿರುವ ಭಾರತ ಮತ್ತು ನಮೀಬಿಯಾ ತಂಡಗಳ ನಡುವೆ ನಡೆಯಿತು. ಭಾರತ ತಂಡವು ನಮೀಬಿಯಾ ಎದುರು ಜಯ ಸಾಧಿಸಿತು.
ದುಬೈ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದ ನಡೆದ ಟಾಸ್ ನಲ್ಲಿ ಮೊದಲು ಬ್ಯಾಟಿಂಗ್ ಆಡಿದ ನಮೀಬಿಯಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಗಳನ್ನ ಗಳಿಸಿತು. ಜಡೇಜಾ ಮತ್ತು ಅಶ್ವಿನ್ ಅವರ ಸ್ಪಿನ್ ಮೋಡಿಯಿಂದ ಸಾಧಾರಣ ಮೊತ್ತವನ್ನು ಕಲೆಹಾಕಿತು. ಅದರಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ ಟ್ರಂಪಲ್ ಮ್ಯಾನ್ ಔಟಾಗದೆ ಬೌಂಡರಿ ಮತ್ತು ಸಿಕ್ಸರ್ ಗಳನ್ನ ಸಿಡಿಸಿ ತಂಡದ ಮೊತ್ತವನ್ನು 100 ರ ಗಡಿ ದಾಟಿಸುವಲ್ಲಿ ಪಾತ್ರರಾದರು.
ಭಾರತದ ಬೌಲರ್ ಗಳ ದಿಟ್ಟತನದಿಂದ ಎದುರಿಸಿ ಉತ್ತಮ ಪ್ರದರ್ಶನ ತೋರಿದ ನಮೀಬಿಯಾ ತಂಡ 132 ರನ್ ಗಳಿಸಿ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ.
132 ರನ್ ಗಳ ಗೆಲುವಿನ ಗುರಿಯನ್ನಿಟ್ಟುಕೊಂಡು ಬೆನ್ನತ್ತಿ ಆಡಿದ ಭಾರತ ಕೇವಲ 15.2 ಓವರ್ ಗಳಲ್ಲಿ 1 ವಿಕೆಟ್ ಕಳದುಕೊಂಡು 136 ರನ್ ಗಳಿಸಿ ರೋಚಕ ಜಯ ಸಾಧಿಸಿತು. ಭಾರತ ತಂಡದ ಪರ ಮೊದಲ ವಿಕೆಟ್ ಹಂತದಲ್ಲಿ ಅಂಕಣಕ್ಕೆ ಇಳಿದು ಆಟ ಆಡಿದ K.Lರಾಹುಲ್ ಮತ್ತು ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿ ತಂಡದ ಗೆಲುವಿಗೆ ಕಾರಣರಾದರು.K.L ರಾಹುಲ್ ಕೇವಲ 36 ಎಸೆತಗಳಲ್ಲಿ 54 ರನ್ ಗಳಿಸಿಕೊಂಡರು ಹಾಗೆಯೇ 37 ಎಸೆತಗಳಲ್ಲಿ 56 ರನ್ ಗಳಿಸಿಕೊಂಡ ರೋಹಿತ್ ಶರ್ಮಾ ಔಟಾದರು. ಶರ್ಮಾ ಔಟದ ಬಳಿಕ 2 ನೇ ವಿಕೆಟ್ ಹಂತಕ್ಕೆ ಕಾಲಿಟ್ಟು ಅಂಕಣಕ್ಕೆ ಇಳಿದ ಸುರ್ಯಕುಮರ್ ರವರು ರಾಹುಲ್ ಜೊತೆಗೂಡಿ 19 ಎಸೆತಗಳಲ್ಲಿ 25 ರನ್ ಗಳಿಸಿ ತಂಡದ ಗೆಲುವಿಗೆ ಈ 3 ಜನ ಬ್ಯಾಟಿಂಗ್ ಗಾರರು ಪ್ರಮುಖ ಕಾರಣರಾದರು .
ಒಟ್ಟಿನಲ್ಲಿ ದುಬೈ ಕ್ರೀಡಾಂಗಣದ ನಿನ್ನೆ ನಡೆದ ಪಂದ್ಯದಲ್ಲಿ ಸೂಪರ್ – 12 ರ ಹಂತದ ಕೊನೆಯ ಪಂದ್ಯದಲ್ಲಿ ಬಲಿಷ್ಠ ಪ್ರದರ್ಶನ ತೋರಿದ ಭಾರತ ಸೆಮಿಫೈನಲ್ ಬಾಗಿಲು ಮುಚ್ಚಿದ್ದರೂ ಕೂಡ ಕ್ರಿಕೆಟ್ ಶಿಶು ನಮೀಬಿಯಾ ವಿರುದ್ಧ ಗೆದ್ದು ಬೀಗಿ ತವರಿನತ್ತ ಸಾಗಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...