Friday, April 3, 2026
Friday, April 3, 2026

ಲಿಖಿಂಪುರ-ಖೇರಿ ರೈತರ ಹತ್ಯೆ,ತನಿಖಾ ಪ್ರಗತಿ

Date:

ಲಿಖಿಂಪುರ – ಖೇರಿ ಪ್ರಕರಣದ ತನಿಖೆಯು ಸಮರ್ಪಕವಾಗಿಲ್ಲ. ಒಬ್ಬ ಆರೋಪಿಯನ್ನು ರಕ್ಷಿಸುವ ಉದ್ದೇಶದಿಂದಲೇ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ತೋರುತ್ತಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಲಿಕಿಂಗ್ ಪುರ ಕೇರಿ ಪ್ರಕರಣದಲ್ಲಿ ನ್ಯಾಯ ಸಿಗಬೇಕಾದರೆ ಸ್ವತಂತ್ರ ತನಿಖೆ ಅಗತ್ಯ ಎಂಬುದು ಸುಪ್ರೀಂಕೋರ್ಟ್ ಅಭಿಪ್ರಾಯದಿಂದ ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ರೈತರ ಹತ್ಯೆ ಮಾಡಿದವರ ಜೊತೆಗೆ ಉತ್ತರಪ್ರದೇಶ ಸರ್ಕಾರ ನಿಂತಿದೆ ಎಂಬುದು ಈಗ ಸ್ಪಷ್ಟವಾಗಿದೆ. ರೈತನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ತಂದೆಗೆ ( ಶ್ರೀ ಅಜಯ್ ಮಿಶ್ರಾ, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ) ನರೇಂದ್ರ ಮೋದಿ ಅವರ ರಕ್ಷಣೆ ಇದೆ” ಎಂದು ಅವರು ಆರೋಪಿಸಿದ್ದಾರೆ.
ಎಸ್ ಯುವಿ ವಾಹನ ಹರಿಸಿ ನಾಲ್ವರು ರೈತರ ಹತ್ಯೆ ಮತ್ತು ನಂತರದ ಹಿಂಸಾಚಾರದಲ್ಲಿ ನಾಲ್ವರ ಹತ್ತಿ ಪ್ರಕರಣವು ಉತ್ತರಪ್ರದೇಶದ ಲಖಿಂಪುರ- ಖೇರಿಯಲ್ಲಿ ಅಕ್ಟೋಬರ್ 3ರಂದು ನಡೆದಿತ್ತು. ಆಶಿಶ್ ಅವರೇ ರೈತರ ಮೇಲೆ ಎಸ್ ವಿಯು ವಾಹನ ಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ಎನ್‌‌.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು ತನಿಖೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸಾಕ್ಷಿಗಳನ್ನು ಬೇರೆಬೇರೆ ಎಫ್ ಐಆರ್ ಗಳಲ್ಲಿ ದಾಖಲಿಸಿ ಗೋಜಲು ಮಾಡಲಾಗಿದೆ ಎಂದು ಪೀಠವು ಹೇಳಿದೆ.
ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಬಿಟ್ಟರೆ ಉಳಿದ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಏಕೆ ಜಪ್ತಿ ಮಾಡಿಕೊಂಡಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ. ಉಳಿದ ಆರೋಪಿಗಳು ಮೊಬೈಲ್ ಫೋನ್ ಬಳಸಿಲ್ಲವೇ ಎಂದು ಕೇಳಿದೆ.
ತನಿಖೆಯ ಸ್ಥಿತಿಗತಿ ವರದಿಯಲ್ಲಿ ಏನೂ ಇಲ್ಲ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹತ್ತು ದಿನ ಸಮಯ ಕೊಡಲಾಗಿತ್ತು‌. ಆದರೆ, ಪ್ರಯೋಗಾಲಯದ ವರದಿಗಳನ್ನೇ ಸಲ್ಲಿಸಲಾಗದೇ ಇದ್ದುದ್ದೇ ಸುಪ್ರೀಂಕೋರ್ಟ್ ಸಿಟ್ಟಿಗೆ ಕಾರಣವಾಗಿದೆ.
ಈ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್ ಮೂರನೇ ಬಾರಿ ತರಾಟೆಗೆ ತೆಗೆದುಕೊಂಡಿದೆ. ಪ್ರಮುಖ ಆರೋಪಿ ಆಶಿಶ್ ಅವರನ್ನು ಬಂಧಿಸಿದ ಬಗ್ಗೆ ಸುಪ್ರೀಂಕೋರ್ಟ್ ಅಕ್ಟೋಬರ್ 11ರಂದು ಆಕ್ಷೇಪ ವ್ಯಕ್ತಪಡಿಸಿತ್ತು. ಅದಾದ ಮೂರು ದಿನಗಳ ಬಳಿಕ, ಆಶಿಶ್ ಬಂಧನವಾಗಿತ್ತು. ಸಾಕ್ಷಿಗಳ ಹೇಳಿಕೆ ದಾಖಲು ವಿಚಾರದಲ್ಲಿಯೂ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...