Wednesday, July 9, 2025
Wednesday, July 9, 2025

ಲಿಖಿಂಪುರ-ಖೇರಿ ರೈತರ ಹತ್ಯೆ,ತನಿಖಾ ಪ್ರಗತಿ

Date:

ಲಿಖಿಂಪುರ – ಖೇರಿ ಪ್ರಕರಣದ ತನಿಖೆಯು ಸಮರ್ಪಕವಾಗಿಲ್ಲ. ಒಬ್ಬ ಆರೋಪಿಯನ್ನು ರಕ್ಷಿಸುವ ಉದ್ದೇಶದಿಂದಲೇ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ತೋರುತ್ತಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಲಿಕಿಂಗ್ ಪುರ ಕೇರಿ ಪ್ರಕರಣದಲ್ಲಿ ನ್ಯಾಯ ಸಿಗಬೇಕಾದರೆ ಸ್ವತಂತ್ರ ತನಿಖೆ ಅಗತ್ಯ ಎಂಬುದು ಸುಪ್ರೀಂಕೋರ್ಟ್ ಅಭಿಪ್ರಾಯದಿಂದ ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ರೈತರ ಹತ್ಯೆ ಮಾಡಿದವರ ಜೊತೆಗೆ ಉತ್ತರಪ್ರದೇಶ ಸರ್ಕಾರ ನಿಂತಿದೆ ಎಂಬುದು ಈಗ ಸ್ಪಷ್ಟವಾಗಿದೆ. ರೈತನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ತಂದೆಗೆ ( ಶ್ರೀ ಅಜಯ್ ಮಿಶ್ರಾ, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ) ನರೇಂದ್ರ ಮೋದಿ ಅವರ ರಕ್ಷಣೆ ಇದೆ” ಎಂದು ಅವರು ಆರೋಪಿಸಿದ್ದಾರೆ.
ಎಸ್ ಯುವಿ ವಾಹನ ಹರಿಸಿ ನಾಲ್ವರು ರೈತರ ಹತ್ಯೆ ಮತ್ತು ನಂತರದ ಹಿಂಸಾಚಾರದಲ್ಲಿ ನಾಲ್ವರ ಹತ್ತಿ ಪ್ರಕರಣವು ಉತ್ತರಪ್ರದೇಶದ ಲಖಿಂಪುರ- ಖೇರಿಯಲ್ಲಿ ಅಕ್ಟೋಬರ್ 3ರಂದು ನಡೆದಿತ್ತು. ಆಶಿಶ್ ಅವರೇ ರೈತರ ಮೇಲೆ ಎಸ್ ವಿಯು ವಾಹನ ಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ಎನ್‌‌.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು ತನಿಖೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸಾಕ್ಷಿಗಳನ್ನು ಬೇರೆಬೇರೆ ಎಫ್ ಐಆರ್ ಗಳಲ್ಲಿ ದಾಖಲಿಸಿ ಗೋಜಲು ಮಾಡಲಾಗಿದೆ ಎಂದು ಪೀಠವು ಹೇಳಿದೆ.
ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಬಿಟ್ಟರೆ ಉಳಿದ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಏಕೆ ಜಪ್ತಿ ಮಾಡಿಕೊಂಡಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ. ಉಳಿದ ಆರೋಪಿಗಳು ಮೊಬೈಲ್ ಫೋನ್ ಬಳಸಿಲ್ಲವೇ ಎಂದು ಕೇಳಿದೆ.
ತನಿಖೆಯ ಸ್ಥಿತಿಗತಿ ವರದಿಯಲ್ಲಿ ಏನೂ ಇಲ್ಲ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹತ್ತು ದಿನ ಸಮಯ ಕೊಡಲಾಗಿತ್ತು‌. ಆದರೆ, ಪ್ರಯೋಗಾಲಯದ ವರದಿಗಳನ್ನೇ ಸಲ್ಲಿಸಲಾಗದೇ ಇದ್ದುದ್ದೇ ಸುಪ್ರೀಂಕೋರ್ಟ್ ಸಿಟ್ಟಿಗೆ ಕಾರಣವಾಗಿದೆ.
ಈ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್ ಮೂರನೇ ಬಾರಿ ತರಾಟೆಗೆ ತೆಗೆದುಕೊಂಡಿದೆ. ಪ್ರಮುಖ ಆರೋಪಿ ಆಶಿಶ್ ಅವರನ್ನು ಬಂಧಿಸಿದ ಬಗ್ಗೆ ಸುಪ್ರೀಂಕೋರ್ಟ್ ಅಕ್ಟೋಬರ್ 11ರಂದು ಆಕ್ಷೇಪ ವ್ಯಕ್ತಪಡಿಸಿತ್ತು. ಅದಾದ ಮೂರು ದಿನಗಳ ಬಳಿಕ, ಆಶಿಶ್ ಬಂಧನವಾಗಿತ್ತು. ಸಾಕ್ಷಿಗಳ ಹೇಳಿಕೆ ದಾಖಲು ವಿಚಾರದಲ್ಲಿಯೂ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...

Rotary Club ರೋಟರಿ ಕ್ಲಬ್ ರಿವರ್ ಸೈಡ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಸನ್ಮಾನ

Rotary Club 24 ವರ್ಷಗಳಿಂದ ನಿರಂತರವಾಗಿ ಮನುಕುಲದ ಸೇವೆಯಲ್ಲಿ ಹಾಗೂ ಸಮಾಜಮುಖಿ...

Sitaramchandra Temple ಭಗವದ್ಗೀತೆಯ ಜ್ಞಾನದಿಂದ ಸಮಾಜದಲ್ಲಿ ಶಾಂತಿ & ಮಾನವೀಯತೆ ಸ್ಥಾಪನೆ- ಅಶೋಕ ಭಟ್

Sitaramchandra Temple ಭಗವದ್ಗೀತಾ ಜ್ಞಾನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸರ್ವರೂ ಸಮಾನರಾಗಿ ಸಮಾಜದಲ್ಲಿ...

Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್

Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ...