Sunday, February 9, 2025
Sunday, February 9, 2025

ಮತ್ತಷ್ಟು ಕನ್ನಡಿಗರಿಗೆ ಪದ್ಮ ಪುರಸ್ಕಾರ

Date:

ರಾಜ್ಯದ ಮೂರು ಸಾಧಕರಿಗೆ ಮಂಗಳವಾರ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೈದ್ಯ ಮತ್ತು ಶಿಕ್ಷಣ ತಜ್ಞ ಬಿ.ಎಂ‌. ಹೆಗ್ಡೆ, ಪ್ಯಾರಾ ಅಥ್ಲೀಟ್ ಕೆ.ವೈ. ವೆಂಕಟೇಶ್, ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಸೇರಿದಂತೆ ಹಲವು ಗಣ್ಯರು ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮ ಪ್ರಶಸ್ತಿ ಸ್ವೀಕರಿಸಿದರು. ಕೆ. ವೈ. ವೆಂಕಟೇಶ್ ಹಾಗೂ ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಹಾಗೂ ಬಿ.ಎಂ. ಹೆಗ್ಡೆ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಕೆ.ಎಸ್.ಚಿತ್ರಾ , ಅಗ್ರಿ ಶಿಲ್ಪಿ ಸುದರ್ಶನ್ ಸಾಹೂ ಅವರು ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದರೆ, ಎಸ್. ಪಿ. ಬಾಲಸುಬ್ರಮಣ್ಯಂ ಪರವಾಗಿ ಅವರ ಪುತ್ರ ಪದ್ಮವಿಭೂಷಣ ಸ್ವೀಕರಿಸಿದರು.
ಡಾ.ಬಿ.ಎಂ‌. ಹೆಗಡೆ ಅವರು ವ್ಹೀಲ್ ಚೇರ್ ನಲ್ಲಿ ಬಂದು ಪ್ರಶಸ್ತಿ ಪಡೆದುಕೊಂಡರು. ಜೋಗತಿ ಮಂಜಮ್ಮ ಅವರು ಪ್ರಶಸ್ತಿ ಪಡೆದ ಬಳಿಕ ರಾಷ್ಟ್ರಪತಿಯವರಿಗೆ ದೃಷ್ಟಿ ತೆಗೆಯುವ ಮೂಲಕ ಗಮನ ಸೆಳೆದರು.
ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್, ಕೇಂದ್ರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್, ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಘೋಷಿಸಿದ್ದು, ಗೊಗೊಯ್ ಅವರ ಪತ್ನಿ, ಪಾಸ್ವಾನ್ ಅವರ ಪುತ್ರ ಹಾಗೂ ಪಟೇಲ್ ಪುತ್ರ ಪ್ರಶಸ್ತಿ ಸ್ವೀಕರಿಸಿದರು.
ಟೇಬಲ್ ಟೆನಿಸ್ ಆಟಗಾರ್ತಿ ಮೌಮಾದಾಸ್, ಕುಸ್ತಿಪಟು ವೀರೇಂದರ್ ಸಿಂಗ್, ಬಾಂಗ್ಲಾದೇಶ ವಿಮೋಚನೆ ಯುದ್ಧದಲ್ಲಿ ಮಹತ್ವದ ಪಾತ್ರವಹಿಸಿದ ಲೆಫ್ಟಿನೆಂಟ್ ಕರ್ನಲ್ ಖ್ವಾಜಿ ಸಜ್ಜದ್ ಅಲಿ ಜಹೀರ್, ಸೇರಿದಂತೆ 51 ಸಾಧಕರಿಗೆ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ನಾಲ್ವರಿಗೆ ಪದ್ಮವಿಭೂಷಣ, ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೆಲವು ಮೆಲುಕುಗಳು

ಲೇ: ಗೋಪಾಲ್ ಯಡಗೆರೆ.ಹಿರಿಯ ವರದಿಗಾರರು. ಕನ್ನಡಪ್ರಭ. ಶಿವಮೊಗ್ಗ Klive Special Article ...

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್...

Guarantee scheme ರಾಜ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರ ಮೆಚ್ಚುಗೆ

Guarantee scheme ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು...

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ‌ಕ್ಕೆ ಒತ್ತು‌ ನೀಡಲಾಗುವುದು- ಗುರುದತ್ತ ಹೆಗಡೆ

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ,...