ಆಫ್ಘಾನಿಸ್ತಾನದಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ಪ್ರಾದೇಶಿಕ ದೇಶಗಳ ನಡುವೆ ಸಮಾಲೋಚನೆ ಹೆಚ್ಚಿನ ಸಹಕಾರ ಮತ್ತು ಸಮನ್ವಯ ಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ರಾದ ಅಜಿತ್ ದೋವಲ್ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಭಾರತ, ಇರಾನ್, ರಷ್ಯಾ ಹಾಗೂ ಮತ್ತು ಏಷ್ಯಾದ ಐದು ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಭಾಗಿಯಾಗಿದ್ದರು.
ಅಫ್ಘಾನಿಸ್ತಾನ ಜಾಗತಿಕ ಭಯೋತ್ಪಾದಕರ ಸುರಕ್ಷಿತ ನೆಲೆ ಯಾಗದಂತೆ ನೋಡಿಕೊಳ್ಳುವ ದಿಸೆಯಲ್ಲಿ ಕೆಲಸ ಮಾಡಲು ಭಾರತ-ರಷ್ಯಾ ಇರಾನ್ ಹಾಗೂ ಮಧ್ಯ ಏಷ್ಯಾದ ದೇಶಗಳು ನವದೆಹಲಿಯಲ್ಲಿ ಪ್ರತಿಜ್ಞೆ ಮಾಡಿದವು.
ಅಫ್ಘಾನಿಸ್ತಾನದ ಜನರು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಸಭೆ ಕಳವಳ ವ್ಯಕ್ತಪಡಿಸಿತು.ಮಹಿಳೆ ಮಕ್ಕಳು ಮತ್ತು ಅಲ್ಪಸಂಖ್ಯಾತ ಸಮುದಾಯದ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಭದ್ರತಾ ಸಭೆ ಹೇಳಿದೆ.
ಅಫ್ಘಾನ್ ವಿಚಾರದಲ್ಲಿ ವಿಶ್ವಸಂಸ್ಥೆ ಕೈಗೊಂಡ ನಿರ್ಣಯವನ್ನು ಸಭೆ ಪ್ರಸ್ತಾಪಿಸಿತು. ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದು, ಅಲ್ಲಿ ಅದರ ನಿರಂತರ ಉಪಸ್ಥಿತಿ ಅಗತ್ಯವಿದೆ ಎಂದು ವಿವಿಧ ದೇಶಗಳ ಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ನೆರವು ನೀಡಬೇಕಿದೆ ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಯಿತು.ಆಫ್ಘಾನಿಸ್ತಾನಕ್ಕೆ ಮಾನವೀಯ ನೆರವನ್ನು ಅಡೆತಡೆ ಇಲ್ಲದೆ, ನೇರ ಮತ್ತು ಭರವಸೆಯ ರೀತಿಯಲ್ಲಿ ಒದಗಿಸಬೇಕು ಹಾಗೂ ಎಲ್ಲಾ ವರ್ಗಗಳಿಗೂ ತಾರತಮ್ಯವಿಲ್ಲದೆ ಸಹಾಯ ಮಾಡಬೇಕು ಎಂದು ಭದ್ರತಾ ಅಧಿಕಾರಿಗಳು ಹೇಳಿದರು.
ಭವಿಷ್ಯದಲ್ಲಿ ಸದಸ್ಯ ದೇಶಗಳು ಪರಸ್ಪರ ಸಂಪರ್ಕದಲ್ಲಿರಬೇಕು ಎಂಬುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಅಧಿಕಾರಿಗಳು ಸಭೆಯ ನಿರ್ಣಯದ ಬಗ್ಗೆ ಮಾಹಿತಿ ಒದಗಿಸಿದರು.
ಆಫ್ಘನ್ ಸಮಸ್ಯೆ : ವಿಶ್ವಸಂಸ್ಥೆ ಕಣ್ಗಾವಲು ಅಗತ್ಯ
Date: