Tuesday, February 3, 2026
Tuesday, February 3, 2026

ಬಿಟ್ ಕಾಯಿನ್ ವಿಚಾರ ಬಿಡಿ, ಕೆಲಸಕ್ಕೆ ಗಮನ ಕೊಡಿ

Date:

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ವರಿಷ್ಠರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿವರಣೆ ನೀಡಿದ್ದಾರೆ.ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಪ್ರಧಾನಿಯವರು ಕೇಳಲಿಲ್ಲ. ನಾನು ಅವರಿಗೆ ಈ ವಿಚಾರ ತಿಳಿಸಿದೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಜನಪರ ಕೆಲಸ ಮಾಡಿ ಎಂದು ಪ್ರಧಾನಿ ಸೂಚಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ.
ಮಾದಕ ವಸ್ತು ಸರಬರಾಜು, ವರ್ಗಾವಣೆ ದಂಧೆ ಇತ್ಯಾದಿ ಅಕ್ರಮಗಳಲ್ಲಿ ಬಿಟ್ ಕಾಯಿನ್ ಅವ್ಯವಹಾರ ನಂಟು ಹೊಂದಿದೆ ಎನ್ನಲಾಗುತ್ತಿದೆ.ಆದರೆ ಈ ಪ್ರಕರಣದ ಖಳ ನಾಯಕರು ಯಾರು ಎಂಬ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಕಿತ್ತಾಟ ನಡೆಯುತ್ತಿದೆ. ಈ ವಿಚಾರವನ್ನು ಹಾನಗಲ್, ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಪ್ರಸ್ತಾಪಿಸಿತ್ತು. ನಂತರ ಈ ಬಗೆಗಿನ ಚರ್ಚೆ ಬಿಸಿಯೇರಿತ್ತು.ಇದರ ಬಗ್ಗೆ ಪ್ರಧಾನಿ ಕಾರ್ಯಾಲಯ ಕೂಡ ಮಾಹಿತಿ ಕೇಳಿತ್ತು ಎಂದು ಹೇಳಲಾಗಿತ್ತು.
ಈ ವಿಚಾರವಾಗಿ ಜನ್ ಧನ್ ಖಾತೆಗಳಿಂದ ತಲಾ ಎರಡು ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ, ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ವಿವರಣೆ ನೀಡಿದ್ದಾರೆ. ಇದಲ್ಲದೆ ತಮ್ಮ ನೇತೃತ್ವದ ರಾಜ್ಯ ಸರ್ಕಾರದ ನೂರು ದಿನದ ಸಾಧನೆ ಬಗ್ಗೆಯೂ ಪ್ರಧಾನಿಯವರಿಗೆ ವಿಷಯ ತಿಳಿಸಿದ್ದಾರೆ. ಈ ಅವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿದ್ದಾರೆ. ಈ ಕೆಲಸಗಳ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಸಿಎಂ ಹೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...