Wednesday, March 26, 2025
Wednesday, March 26, 2025

ಬಿಟ್ ಕಾಯಿನ್ ವಿಚಾರ ಬಿಡಿ, ಕೆಲಸಕ್ಕೆ ಗಮನ ಕೊಡಿ

Date:

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ವರಿಷ್ಠರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿವರಣೆ ನೀಡಿದ್ದಾರೆ.ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಪ್ರಧಾನಿಯವರು ಕೇಳಲಿಲ್ಲ. ನಾನು ಅವರಿಗೆ ಈ ವಿಚಾರ ತಿಳಿಸಿದೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಜನಪರ ಕೆಲಸ ಮಾಡಿ ಎಂದು ಪ್ರಧಾನಿ ಸೂಚಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ.
ಮಾದಕ ವಸ್ತು ಸರಬರಾಜು, ವರ್ಗಾವಣೆ ದಂಧೆ ಇತ್ಯಾದಿ ಅಕ್ರಮಗಳಲ್ಲಿ ಬಿಟ್ ಕಾಯಿನ್ ಅವ್ಯವಹಾರ ನಂಟು ಹೊಂದಿದೆ ಎನ್ನಲಾಗುತ್ತಿದೆ.ಆದರೆ ಈ ಪ್ರಕರಣದ ಖಳ ನಾಯಕರು ಯಾರು ಎಂಬ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಕಿತ್ತಾಟ ನಡೆಯುತ್ತಿದೆ. ಈ ವಿಚಾರವನ್ನು ಹಾನಗಲ್, ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಪ್ರಸ್ತಾಪಿಸಿತ್ತು. ನಂತರ ಈ ಬಗೆಗಿನ ಚರ್ಚೆ ಬಿಸಿಯೇರಿತ್ತು.ಇದರ ಬಗ್ಗೆ ಪ್ರಧಾನಿ ಕಾರ್ಯಾಲಯ ಕೂಡ ಮಾಹಿತಿ ಕೇಳಿತ್ತು ಎಂದು ಹೇಳಲಾಗಿತ್ತು.
ಈ ವಿಚಾರವಾಗಿ ಜನ್ ಧನ್ ಖಾತೆಗಳಿಂದ ತಲಾ ಎರಡು ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ, ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ವಿವರಣೆ ನೀಡಿದ್ದಾರೆ. ಇದಲ್ಲದೆ ತಮ್ಮ ನೇತೃತ್ವದ ರಾಜ್ಯ ಸರ್ಕಾರದ ನೂರು ದಿನದ ಸಾಧನೆ ಬಗ್ಗೆಯೂ ಪ್ರಧಾನಿಯವರಿಗೆ ವಿಷಯ ತಿಳಿಸಿದ್ದಾರೆ. ಈ ಅವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿದ್ದಾರೆ. ಈ ಕೆಲಸಗಳ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಸಿಎಂ ಹೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education ಮಾರ್ಚ್ 27 & 28 ರಂದು ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ‌ ಕ್ರೀಡಾಕೂಟ

Department of School Education ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ...

BJP Protest 18 ಶಾಸಕರ ಅಮಾನತು. ಸರ್ಕಾರದಿಂದ ಅಧಿಕಾರ ದುರುಪಯೋಗ. ಜಿಲ್ಲಾ ಬಿಜೆಪಿ‌‌ ಪ್ರತಿಭಟನೆ

BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ,...

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು...

World Tuberculosis Day ಕ್ಷಯರೋಗವು ಹರಡುವ ರೋಗ ಕುಟುಂಬಸ್ಥರು ಬಹಳ ಎಚ್ಚರದಿಂದಿರಬೇಕು- ಡಾ.ಕೆ. ಎಸ್.ನಟರಾಜ್

World Tuberculosis Day ಕ್ಷಯರೋಗ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಭಾರತ...