ಸಿಎಂ ಬೊಮ್ಮಾಯಿ ಅವರು ನೂರು ದಿನಗಳ ಆಡಳಿತದ ವರದಿನೀಡಲು ದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಬಿಟ್ ಕಾಯಿನ್ ಪ್ರಸಂಗದ ಬಗ್ಗೆ ಪ್ರಸ್ತಾಪಿಸಿದಾಗ, ಪ್ರಧಾನಿಯವರು ತಲೆಕೆಡಿಸಿಕೊಳ್ಳಬೇಡಿ ಎಂದಿದ್ದಾರೆ. ಇದಲ್ಲದೆ ರಾಜ್ಯದ ವಿವಿಧ ಪ್ರಗತಿಪರ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ. ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಕೈಗೊಳ್ಳಲಿರುವ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಗಮನಕ್ಕೆ ತಂದಿದ್ದಾರೆ. ಅವುಗಳಲ್ಲಿ ,ಬೆಂಗಳೂರು ಉಪನಗರ ರೈಲು ಯೋಜನೆಗೆ ಅಡಿಗಲ್ಲು. ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಮತ್ತು ಉನ್ನತೀಕರಿಸಿದ ಐಟಿಐ ಗಳ ಉದ್ಘಾಟನೆ. ಮುಂತಾದ ಕಾರ್ಯಕ್ರಮಗಳಲ್ಲಿ ಗಣ್ಯ ಅತಿಥಿಯಾಗಿ ಪಾಲ್ಗೊಳ್ಳಲು ಪ್ರಧಾನಿಯವರನ್ನು ಆಹ್ವಾನಿಸಿದ್ದಾರೆ. ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಈ ಕಾರ್ಯಕ್ರಮಗಳು ಆಯೋಜನೆಯಾಗಿವೆ.