Sunday, December 14, 2025
Sunday, December 14, 2025

ಧನ್ಯವಾಯಿತು ಹುಟ್ಟು ಸಾವಿನಲ್ಲಿ

Date:

ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೆಲಸವನ್ನು ಡಾ. ರಾಜಕುಮಾರ್ ಕುಟುಂಬ ಹಿಂದಿನಿಂದಲೂ ರೂಪಿಸಿಕೊಂಡು ಬಂದಿದೆ. ಇತ್ತೀಚಿಗೆ ಕನ್ನಡ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನದಿಂದಾಗಿ ಇಡೀ ದೇಶವೇ ದಿಗ್ಭ್ರಮೆಗೆ ಒಳಗಾಗಿದ್ದರೂ ಸಹ ಅವರ ಮರಣದ ನಂತರ ನೇತ್ರದಾನ ಮಾಡುವ ಮೂಲಕ ನಾಲ್ವರು ಅಂಧರ ಬಾಳಲ್ಲಿ ಬೆಳಕು ಮೂಡಿತು. ಈಗ ಪುನೀತ್ ಅವರ ಕಣ್ಣಿನಿಂದ ಇದೇ ಮೊದಲ ಬಾರಿಗೆ ಹತ್ತು ಜನಕ್ಕೆ ದೃಷ್ಟಿ ನೀಡಲು ನಾರಾಯಣ ನೇತ್ರಾಲಯದ ವೈದ್ಯರು ಮುಂದಾಗಿದ್ದಾರೆ.

ಪ್ರಥಮಬಾರಿಗೆ ಒಬ್ಬ ವ್ಯಕ್ತಿಯ ಕಾರ್ನಿಯ ಹಾಗೂ ಸ್ಟೆಮ್ ಸೆಲ್ ಎರಡನ್ನು ಬಳಸಿ ಅಂದರಿಗೆ ದೃಷ್ಟಿ ನೀಡುವ ಪ್ರಯತ್ನಕ್ಕೆ ನಾರಾಯಣ ನೇತ್ರಾಲಯ ಮುಂದಾಗುವ ಮೂಲಕ ರಾಜ್ಯದಲ್ಲೇ ಹೊಸ ದಾಖಲೆ ಸೃಷ್ಟಿಸುವಲ್ಲಿ ಮುಂದಾಗಲಿದೆ.

ಏನಿದು ಸ್ಟೆಮ್ ಸೆಲ್ ?

ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ತಿಳಿದ ತಕ್ಷಣ ಆಸ್ಪತ್ರೆಗೆ ಬಂದ ನಾರಾಯಣ ನೇತ್ರಾಲಯ ಡಾ.ಭುಜಂಗ ಶೆಟ್ಟಿ ಅವರು ಪುನೀತ್ ಅವರ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿದರು.

ಪುನೀತ್ ಅವರ ಕಣ್ಣಿನ ಬಿಳಿ ಗುಡ್ಡೆಯಿಂದ ತೆಗೆಯಲಾದ ಸ್ಟೆಮ್ ಸೆಲ್ ಗಳನ್ನು ಸಂಗ್ರಹಿಸಿ ಲ್ಯಾಬೋರೇಟರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಸ್ಟೆಮ್ ಸೆಲ್ ಗಳು ಮಲ್ಟಿಪಲ್ ಆಗುತ್ತಿವೆ. ಈ ಪ್ರಕ್ರಿಯೆಗೆ ಸ್ವಲ್ಪ ಸಮಯ ಹಿಡಿಯುತ್ತಿದ್ದು, ಸ್ಟೆಮ್ ಸೆಲ್ ಗಳು ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿಯಾದ ಬಳಿಕ ಸ್ಟೆಮ್ ಸೆಲ್ ನಿಂದ ದೃಷ್ಟಿ ಕಳೆದುಕೊಂಡಿದ್ದ ಅಂದರಿಗೆ ಕಸಿ ಮಾಡಬಹುದಾಗಿದೆ.

ಪಟಾಕಿ ಸಿಡಿತದಿಂದಾಗಿ ಅಥವಾ ವಂಶವಾಹಿನಿಯಿಂದಾಗಿ ಹಲವರಲ್ಲಿ ಅಂಧತ್ವ ಸಮಸ್ಯೆ ಇರುತ್ತದೆ. ಅಂತವರಿಗೆ ಸ್ಟೆಮ್ ಸೆಲ್ ಅಳವಡಿಕೆ ಮಾಡುವುದರಿಂದ ದೃಷ್ಟಿ ನೀಡಲು ಸಾಧ್ಯವಿದೆ ಹಾಗೂ ಪುನೀತ್ ರಾಜಕುಮಾರ್ ಅವರ ಸ್ಟೆಮ್ ಸೆಲ್ ಗಳನ್ನು 10 ದಿನದಲ್ಲಿ 10ಕ್ಕೂ ಹೆಚ್ಚು ಮಂದಿಗೆ ದೃಷ್ಟಿ ನೀಡುವ ಪ್ರಯತ್ನ ಯಶಸ್ವಿಯಾದರೆ ರಾಜ್ಯದ ಮಟ್ಟಿಗೆ ಇದು ಹೊಸ ದಾಖಲೆಯಾಗಲಿದೆ ಎಂದು ಡಾ.ಭುಜಂಗ ಶೆಟ್ಟಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...