Thursday, February 5, 2026
Thursday, February 5, 2026

ಸೀಟ್ ಬ್ಲಾಕಿಂಗ್ ದಂಧೆಗೆ ಸರ್ಕಾರದ ಕಡಿವಾಣ

Date:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಕೌನ್ಸಿಲಿಂಗ್ ಸಮಯದಲ್ಲೇ ಸಂಪೂರ್ಣ ಶುಲ್ಕ ಭರ್ತಿ ಮಾಡಿಕೊಳ್ಳುವ ಕ್ರಮಕ್ಕೆ ಮುಂದಾಗಿದೆ. ಇದರಿಂದಾಗಿ ಅನುದಾನರಹಿತ ಖಾಸಗಿ ಕಾಲೇಜುಗಳ ಇಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ನಡೆಯುತ್ತಿದ್ದಂತಹ ‘ಸೀಟ್ ಬ್ಲಾಕಿಂಗ್’ ಹಾವಳಿಗೆ ತೆರೆ ಎಳೆದಿದೆ.

ಈ ವರ್ಷದ ಶೈಕ್ಷಣಿಕ ಕೌನ್ಸೆಲಿಂಗ್ ಸಮಯದಲ್ಲಿ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಸೇರಿದಂತೆ 20 ಲಕ್ಷ ರೂಪಾಯಿ ಮೊತ್ತದ ಸಂಪೂರ್ಣ ಶುಲ್ಕವನ್ನು ಆರಂಭದಲ್ಲಿ ಪಾವತಿಸಬೇಕು ಹಾಗೂ ವಿದ್ಯಾರ್ಥಿಗಳು ಪ್ರವೇಶ ಪಡೆದ ಬಗ್ಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜೊತೆಗೆ ಕಾಮೆಡ್-ಕೆ ಅಧಿಕಾರಿಗಳು ಪರಿಶೀಲನೆ ನಡೆಸಿ ಮನದಟ್ಟು ಮಾಡಿಕೊಳ್ಳುತ್ತಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆಲ್ಲಾ ವಿದ್ಯಾರ್ಥಿಗಳು ತಮಗೆ ಸೀಟು ದೊರೆತಾಗ ಬೋಧನಾ ಶುಲ್ಕದಲ್ಲಿ 55 ಸಾವಿರ ರೂಪಾಯಿ ಮಾತ್ರ ಪಾವತಿಸುತ್ತಿದ್ದರು. ನಂತರ ಕೌನ್ಸಿಲಿಂಗ್ ನ ಎಲ್ಲಾ ಸುತ್ತುಗಳು ಮುಗಿದ ಮೇಲೆ ಸೀಟುಗಳನ್ನು ಬಿಟ್ಟು ಕೊಡುತ್ತಿದ್ದರಿಂದ ಸ್ವಾಭಾವಿಕವಾಗಿ ಸೀಟುಗಳು ಆಡಳಿತ ಮಂಡಳಿಯ ಪಾಲಾಗುತ್ತಿತ್ತು. ಅಂತಹ ಸೀಟುಗಳನ್ನು ಆಡಳಿತ ಮಂಡಳಿ ಹೆಚ್ಚಿನ ಮೊತ್ತಕ್ಕೆ ನೀಡಿ ಹಣ ಗಳಿಸುತ್ತಿದ್ದವು. ಇದರಿಂದ ಪ್ರತಿವರ್ಷ ಶೇ.15 ರಿಂದ 25 ರಷ್ಟು ಸೀಟುಗಳನ್ನು ಬ್ಲಾಕ್ ಮಾಡಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು. ಈ ನಿಟ್ಟಿನಲ್ಲಿ ಪ್ರವೇಶ ಮೇಲ್ವಿಚಾರಣಾ ಸಮಿತಿ ಮುಖ್ಯಸ್ಥರಾಗಿದ್ದ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ.ಮನೋಹರ್ ಸಮಿತಿಯ ಸಲಹೆಯ ಮೇರೆಗೆ ಕೆಇಎ ಕ್ರಮಕ್ಕೆ ಮುಂದಾಗಿದೆ ಎಂದು ಕಾಮೆಡ್-ಕೆ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...