Thursday, February 5, 2026
Thursday, February 5, 2026

ನೇಮಕ ಖಾಯಂ ಕುರಿತು ಸೇನೆಗೆ ಸುಪ್ರೀಂ ಮೃದು ಪೆಟ್ಟು

Date:

ಭಾರತೀಯ ಸೇನೆ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ಸುಪ್ರೀಂಕೋರ್ಟ್ ನೀಡಿದ ಎಚ್ಚರಿಕೆಗೆ ಮಣಿದ ಸೇನೆಯು , ಎಲ್ಲಾ ಅರ್ಹ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗದ ಅನ್ವಯ ಕಾಯಂ ಹುದ್ದೆ ನೀಡುವುದಾಗಿ ತಿಳಿಸಿದೆ.

ಸೇನಾಧಿಕಾರಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ‘ವುಮೆನ್ ಶಾರ್ಟ್ ಸರ್ವಿಸ್ ಕಮಿಷನ್’ ಅಧಿಕಾರಿಗಳಿಗೆ ಕಾಯಂ ನೇಮಕಾತಿ ನೀಡುವಂತೆ ಲೆಫ್ಟಿನೆಂಟ್ ಕರ್ನಲ್ ನಿತಿಶಾ ಪ್ರಕರಣದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎ. ಎಸ್‌. ಬೋಪಣ್ಣ ಅವರಿದ್ದ ದ್ವಿಸದಸ್ಯ ಪೀಠವು, ಅರ್ಜಿಯ ವಿಚಾರಣೆಯನ್ನು ನಡೆಸಿತ್ತು.
ನಂತರ ಹತ್ತು ದಿನಗಳ ಒಳಗಾಗಿ 11 ಮಹಿಳಾ ಅಧಿಕಾರಿಗಳ ಸೇವೆ ಕಾಯಂಗೊಳಿಸಬೇಕು ಎಂದು ಆದೇಶಿಸಿತ್ತು. ಆದರೆ, ತನ್ನ ಆದೇಶವನ್ನು ಕಡೆಗಣಿಸುತ್ತಿರುವುದು ಮತ್ತು ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
“ತನ್ನ ಸುಪರ್ದಿಯಲ್ಲಿ ಭಾರತೀಯ ಸೇನೆ ಅಗ್ರಸ್ಥಾನ ಇರಬಹುದು. ಆದರೆ ಸಾಂವಿಧಾನಿಕ ವ್ಯಾಪ್ತಿಯಲ್ಲಿ ಸುಪ್ರೀಂಕೋರ್ಟ್ ಸರ್ವೋಚ್ಛ ಎನ್ನುವುದನ್ನು ಮರೆಯದಿರಿ.ಈಗಾಗಲೇ ಮಹಿಳಾ ಅಧಿಕಾರಿಗಳ ಖಾಯಂ ನೇಮಕಾತಿಗೆ ಸಾಕಷ್ಟು ಅವಧಿಯನ್ನು ಸರ್ಕಾರಕ್ಕೆ ಮತ್ತು ಭಾರತೀಯ ಸೇನೆಗೆ ಕೋರ್ಟ್ ನೀಡಿದೆ. ನೇಮಕಾತಿ ಸಂಬಂಧ ಇನ್ನೂ ಕೂಡ ಕೋರ್ಟ್ ಮೆಟ್ಟಿಲು ಏರದೇ ಇರುವವರು, ಸೇನೆಯ ಅರ್ಹತಾ ಮಾನದಂಡ ಪೂರೈಸಿದ್ದಲ್ಲಿ ಅವರಿಗೂ ಕೂಡ ಖಾಯಂ ನೇಮಕಾತಿ ಕಲ್ಪಿಸಬೇಕು. ರಕ್ಷಣಾ ಸಚಿವಾಲಯ ಮತ್ತು ಭಾರತೀಯ ಸೇನೆಯು ಸುಪ್ರೀಂ ಆದೇಶ ಉಲ್ಲಂಘಿಸಿ ನಿಂದನೆಗೆ ಗುರಿಯಾಗುವ ಹಠಮಾರಿತನ ಪ್ರದರ್ಶಿಸಲ್ಲ ಎಂಬ ವಿಶ್ವಾಸವಿದೆ” ಎಂದು ನ್ಯಾ. ಚಂದ್ರಚೂಡ್ ಅವರಿದ್ದ ಪೀಠ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...