Sunday, December 7, 2025
Sunday, December 7, 2025

ಕೊರೊನಾ ಲಸಿಕೆ ಆಯ್ತು: ಈಗ ಮಾತ್ರೆಗಳು

Date:

ಕೊರೊನಾ ಮಹಾಮಾರಿಯ ವಿರುದ್ಧ ಸಮರದಲ್ಲಿ ಮತ್ತೊಂದು ಯಶಸ್ಸು ಸಿಕ್ಕಿದೆ. ಅಮೆರಿಕದ ಕಂಪನಿಗಳು ಕೊರೊನಾ ನಿರೋಧಕ ಮಾತ್ರೆಗಳನ್ನು ತಯಾರಿಸಿವೆ. ಮುಂದಿನ ವರ್ಷದ ಆರಂಭದಲ್ಲಿ ಎರಡು ಕೊರೊನಾ ನಿರೋಧಕ ಮಾತ್ರೆಗಳು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.
ಸಂಪೂರ್ಣ ದೇಶಿಯವಾಗಿ ಅಭಿವೃದ್ಧಿಪಡಿಸಲಾದ ಕೊರೊನಾ ನಿರೋಧಕ ಲಸಿಕೆ ‘ಕೋವ್ಯಾಕ್ಸಿನ್’ 2 ಡೋಸ್ ಪಡೆದರೆ ಕೊರೊನಾ ಸೋಂಕು ತಡೆಯುವಲ್ಲಿ ಶೇಕಡ 77.8 ರಷ್ಟು ಪರಿಣಾಮಕಾರಿ ಎಂದು ವೈದ್ಯಕೀಯ ವಿಜ್ಞಾನ ಕ್ಷೇತ್ರದ ಪ್ರತಿಷ್ಠಿತ ಜರ್ನಲ್ ‘ಲ್ಯಾನ್ಸೆಟ್’ ವರದಿ ಮಾಡಿದೆ.
ಈಗ ಎರಡು ಮಾತ್ರೆಗಳನ್ನು ಅಮೆರಿಕದ ಕಂಪನಿಗಳೇ ಅಭಿವೃದ್ಧಿ ಪಡಿಸಿವೆ. ಮರ್ಕ್ ಕಂಪನಿಯು “ಮೊಲ್ನುಪಿರಾವಿರ್” ಬಿಡುಗಡೆಗೆ ಭಾರತದಲ್ಲಿ ಅಗತ್ಯ ಕಾನೂನು ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ. ಮತ್ತು ಫೈಜರ್ ಸಹ ತನ್ನ “ಪ್ಯಾಕ್ಸ್ ಲೊವಿಡ್” ಎಂಬ ಕೋವಿಡ್ ನಿರೋಧಕ ಮಾತ್ರೆಯನ್ನು ಅಭಿವೃದ್ಧಿಪಡಿಸಿದೆ. ಈ ಎರಡೂ ಮಾತ್ರೆಗಳ ಕಂಪನಿಗಳು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲು ತುದಿಗಾಲಲ್ಲಿ ಕಾಯುತ್ತಿವೆ.
ಎರಡು ಮತ್ತು ಮೂರನೇ ಹಂತದ ಪ್ರಯೋಗವನ್ನು ಮುಗಿಸಿರುವ ಫೈಜರ್ ಕಂಪನಿಯು, ಈ ಮಾತ್ರೆಯು ಕೊರೊನಾ ಸೋಂಕಿನ ಭೀಕರತೆ ತಗ್ಗಿಸಿ, ವೈರಾಣುವನ್ನು ನಿಷ್ಕ್ರಿಯಗೊಳಿಸುವಲ್ಲಿ ಪರಿಣಾಮಕಾರಿ ಎಂಬುದು ಸಾಬೀತಾಗಿದೆ ಎಂದು ಹೇಳಿಕೊಂಡಿದೆ. ಈ ಮಾತ್ರೆಯನ್ನು ಸ್ವಲ್ಪ ಪ್ರಮಾಣದ ರಿಟೊನಾವಿರ್ ಔಷಧ ಬೆರೆಸಿದಲ್ಲಿ ಗಂಭೀರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಬಹಳ ಕಡಿಮೆ ಇದೆ ಎಂದು ಕಂಪನಿ ವಿಶ್ವಾಸ ಹೊಂದಿದೆ.
ಮತ್ತೊಂದೆಡೆ, ಮರ್ಕ್ ಕಂಪನಿಯು ಅಭಿವೃದ್ಧಿಪಡಿಸಿರುವ ಕೊರೊನಾ ನಿರೋಧಕ ಮಾತ್ರೆ ‘ಮೊಲ್ನುಪಿರಾವಿರ್’ ಕೂಡ ಶೀಘ್ರವೇ ಭಾರತೀಯ ಮಾರುಕಟ್ಟೆ ಪ್ರವೇಶಿಸಲಿದೆ.
ಮರ್ಕ್ ಕಂಪನಿಯು,ಮೊಲ್ನುಪಿರಾವಿರ್ ಪ್ರಯೋಗಕ್ಕೆ ಒಳಪಟ್ಟ 700 ಕೊರೊನಾ ಸೋಂಕಿತರ ವಿವಿಧ ಪರೀಕ್ಷೆಗಳ ದಾಖಲೆಗಳನ್ನು ಭಾರತದ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿಗೆ ಸಲ್ಲಿಕೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಪ್ಲಾ, ಡಾ. ರೆಡ್ಡೀಸ್, ಲ್ಯಾಬೋರೇಟರೀಸ್, ಹೆಟೆರೊ, ಸನ್ ಫಾರ್ಮಾ, ಹಾಗೂ ಅರಬಿಂದೊ ಫಾರ್ಮಾ ಸೇರಿದಂತೆ ಭಾರತದ 8 ಔಷಧ ತಯಾರಿಕಾ ಕಂಪನಿಗಳ ಜೊತೆ ಮರ್ಕ್ ಕಂಪನಿಯು ಈಗಾಗಲೇ ಒಪ್ಪಂದ ಮಾಡಿಕೊಂಡಿದೆ ಎಂದು ಕೊರೊನಾ ಸಾಂಕ್ರಾಮಿಕ ನಿಯಂತ್ರಣ ಕಾರ್ಯಪಡೆ ಮುಖ್ಯಸ್ಥ ಡಾ. ರಾಮ್ ವಿಶ್ವಕರ್ಮ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...