Saturday, April 4, 2026
Saturday, April 4, 2026

ಸಂತೋಷ, ಸಡಗರ ಕಳೆದುಕೊಂಡ ಹಗಲುವೇಷ

Date:

ನಮ್ಮ ಜನಪದ ಹಲವು ಕಲೆಗಳ ಅದಮ್ಯ ಉಗ್ರಾಣ ಅವುಗಳು ಹಾಡಿನ ರೂಪ, ಕುಣಿತದ ರೂಪ, ವೇಷದ ರೂಪಗಳಾಗಿ ಹೊರಹೊಮ್ಮಿವೆ. ಅಷ್ಟೇ ಅಲ್ಲ ನಮ್ಮ ಗ್ರಾಮೀಣ ಸಂಸ್ಕೃತಿಯ ಸಂಕೇತಗಳು ಆಗಿವೆ. ಹಲವು ಕಲೆಗಳು ಕೆಲವು ಜನಾಂಗಗಳಲ್ಲಿವೆ, ಕೆಲವು ಕಲೆಗಳು ಹಲವು ಜನಾಂಗದಲ್ಲಿವೆ. ಇಂತಹ ಪ್ರದರ್ಶಕ ಕಲೆಗಳಲ್ಲಿ ಹಗಲುವೇಷವು ಒಂದು. ಅಲೆಮಾರಿ ಜನಾಂಗಗಳಲ್ಲಿ ಹೆಚ್ಚಾಗಿ ಈ ಕಲೆ ಮನೆಮಾಡಿದೆ. ಹೊನ್ನಾಳಿ ಯವರಾದ ಶ್ರೀ ಈಶ್ವರಪ್ಪ ಅವರ ಪತ್ನಿ ಶ್ರೀಮತಿ ಮಂಜಳ ಹಾಗೂ ಅವರ ಬಂಧು ಲಕ್ಷ್ಮಣ್ ಈ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಅವರು ನಮ್ಮ Klive ಮಾಧ್ಯಮದೊಂದಿಗೆ ಮಾತನಾಡಿ ತಮ್ಮ ನೋವು-ನಲಿವು ಹಂಚಿಕೊಂಡರು. ಹಗಲುವೇಷ ಕಲೆಯು ಅವರ ಹಬ್ಬದ ಆಚರಣೆಯ ಒಂದು ಭಾಗ. ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಸಂದರ್ಭಗಳಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ ಹಗಲು ವೇಷ ಧರಿಸಿ ಊರು-ಊರು ಅಲೆಯುತ್ತಾರೆ. ಇಂತಹ ಕಲಾವಿದರನ್ನು ಬೀದಿಯಲ್ಲಿ ಕಂಡ ಕಲಾರಸಿಕರು ತಮ್ಮ ಕೈಲಾದ ಕಾಣಿಕೆ ನೀಡಿ ಅಭಿಮಾನ ವ್ಯಕ್ತಪಡಿಸುತ್ತಾರೆ. ಹಗಲುವೇಷ ಇಲ್ಲದ ಸಂದರ್ಭದಲ್ಲಿ ಕೂಲಿ, ಕೃಷಿ, ವ್ಯಾಪಾರ ಮುಂತಾದ ವೃತ್ತಿಗಳಲ್ಲಿ ಜೀವನೋಪಾಯ ಕಂಡುಕೊಳ್ಳುತ್ತಾರೆ. ನಶಿಸಿಹೋಗುವ ಆತಂಕದಲ್ಲಿದೆ ಈ ಕಲಾಪ್ರಕಾರ.ಉಳಿಸಬೇಕೆ? ಬೆಳೆಸಬೇಕೆ? ಜನಪದ ವಿದ್ವಾಂಸರು ಈ ಬಗ್ಗೆ ಚರ್ಚಿಸಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...