ಮಣಿಪುರದ ಚುರಚಾಂದ್ ಪುರ ಜಿಲ್ಲೆಯಲ್ಲಿ ಅಸ್ಸಂ ರೈಫಲ್ ಗೆ ಸೇರಿದಂತಹ ಸೇನಾ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಸೈನಿಕರು, ಸೇನಾದಿಕಾರಿ ವಿಪ್ಲವ್ ತ್ರಿಪಾಠಿ, ಅವರ ಪತ್ನಿ ಮತ್ತು ಮಗ ಸೇರಿದಂತೆ 7 ಮಂದಿ ಮೃತಪಟ್ಟಿರುವುದು ತಿಳಿದುಬಂದಿದೆ.
ರೈಫಲ್ಸ್ ನ ಕಮಾಂಡಿಂಗ್ ಅಧಿಕಾರಿ ಸೇರಿ ಐವರು ಯೋಧರು ಉಗ್ರರದಾಳಿಗೆ ಹುತಾತ್ಮರಾಗಿದ್ದಾರೆ ಹಾಗೂ ಅಧಿಕಾರಿಯ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟ್ ಮಾಡಿದ್ದಾರೆ.
ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದಾಳಿಯ ಬಗ್ಗೆ ಟ್ವೀಟ್ ಮಾಡಿದ್ದು ಹುತಾತ್ಮ ಯೋಧರ ಕುಟುಂಬದವರಿಗೆ ಹೇಳಿದ್ದಾರೆ ಹಾಗೂ ಯೋಧರ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.