ತಮಿಳುನಾಡಿನಲ್ಲಿ ಮಳೆರಾಯನ ಆರ್ಭಟ ತಗ್ಗಿದೆ. ಆದರೆ , ಕೇರಳದಲ್ಲಿ ಮಳೆರಾಯನ ಕಾಟ ಶುರುವಾಗಿದೆ. ಕೇರಳದ ಜನ ಭಾರಿ ಮಳೆಯಿಂದ ಕಂಗೆಟ್ಟಿದ್ದಾರೆ.
ಒಂದೇ ಸಮನೆ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದ ಕೇರಳದ ಆರು ಜಿಲ್ಲೆಗಳಿಗೆ ಕೇರಳದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಅನಾಹುತದಿಂದ ಕೆಲವೆಡೆ ಸಣ್ಣ ಪ್ರಮಾಣದ ಭೂಕುಸಿತ ಉಂಟಾಗಿದೆ.
ನ.16 ರವರೆಗೆ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಳೆಯಿಂದಾಗಿ ತಿರುವನಂತಪುರ ನಾಗರಕೊಯಿಲ್ ಪಟ್ಟಣಗಳಲ್ಲಿ ನೀರು ನಿಂತಿದೆ. ನೆಯ್ಯಟ್ಟಿಂಕರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದೆ.
ತಿರುವಂತಪುರ, ಕೊಲ್ಲಂ, ಇಡುಕ್ಕಿ ಜಿಲ್ಲೆ, ಮುಂತಾದ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ತ್ರಿಶೂರ್, ಕಣ್ಣೂರು, ಎರ್ನಾಕುಲಂ, ಕಾಸರಗೋಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರುವಿಕ್ಕರ(ಕರಮಣ ನದಿ) ಮತ್ತು ಪೆಪ್ಪಾರ ಆಣೆಕಟ್ಟಿನಿಂದ ನೀರು ಬಿಡಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.