Saturday, May 23, 2026
Saturday, May 23, 2026

ನೀರು ಹಂಚಿಕೆ ನಿರ್ಧಾರವಾಗಿಲ್ಲ : ಸಿಎಂ ಬೊಮ್ಮಾಯಿ

Date:

ನೆರೆ ರಾಜ್ಯಗಳು ನೀರಿನ ಬಳಕೆಗೆ ರೂಪಿಸಿರುವ ಜಲ ನ್ಯಾಯ ಮಂಡಳಿ ತೀರ್ಪು ಉಲಂಘಿಸಿ ರೂಪಿಸುತ್ತಿರುವ ಬೃಹತ್ ಮಟ್ಟದ ಶಾಶ್ವತ ಯೋಜನೆಗಳನ್ನು ಕೇಂದ್ರ ಸರ್ಕಾರ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ತಿನ ಸಿ.ಎಂಗಳ 29ನೇ ಸಭೆಯಲ್ಲಿ ಬೊಮ್ಮಾಯಿಯವರು ಕರ್ನಾಟಕದ ಬೇಡಿಕೆಗಳನ್ನು ಮಂಡಿಸಿದರು. ಕೇಂದ್ರ ಗೃಹಸಚಿವ ಅಮಿತ್ ಶಾ ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲು ಎಷ್ಟು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆದರೂ ಕಾವೇರಿ ವೈಗೈ- ಗುಂಡಾರ್ ಸಂಪರ್ಕಿಸುವ ಕಾಮಗಾರಿಯನ್ನು ತಮಿಳುನಾಡು ಮುಂದುವರಿಸಿದೆ. ಶ್ರೀಶೈಲಂ ಜಲಾಶಯದಲ್ಲಿ ಹೆಚ್ಚುವರಿ ಪ್ರಮಾಣದ ಅಪಾರ ನೀರನ್ನ ಬಳಸಿಕೊಂಡು ಹಲವು ಏತ ನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಅಧಿಕಾರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಈ ರೀತಿಯ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಬೊಮ್ಮಾಯಿ ಅವರು ಸಭೆಯಲ್ಲಿ ಗೃಹ ಸಚಿವರ ಗಮನಕ್ಕೆ ತಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...