Friday, April 3, 2026
Friday, April 3, 2026

ಕೊರೊನಾ ನಂತರ ಹೊಸ ಸೋಂಕು?

Date:

ಕೊರೊನಾ ನಂತರ ಹೊಸ ಸೋಂಕು?
ವಿ.ಆ. ಸಂ ಎಚ್ಚರಿಕೆ…

ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲೇ ಮತ್ತೊಂದು ವೈರಸ್ ಭಾರತಕ್ಕೆ ಪ್ರವೇಶಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ಕೊರೊನಾ ನಂತರ ಎ ಎಂ ಆರ್ ( ಆಂಟಿಮೈಕ್ರೊಬಿಯಲ್ ರೆಸಿಸ್ಟೆನ್ಸ್ ) ಎಂಬ ಸೋಂಕು ಅತ್ಯಂತ ವೇಗವಾಗಿ ಎಲ್ಲೆಡೆ ಹರಡುತ್ತಿದೆ. ಆದ್ದರಿಂದ ರಾಜ್ಯಗಳು ಎಎಂಆರ್ ವಿರುದ್ಧ ಹೋರಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವಿ.ಆ.ಸಂ ನಲ್ಲಿ ಭಾರತೀಯ ಅಧಿಕಾರಿಯಾಗಿರುವ ಡಾ. ಅನುಜ್ ಶರ್ಮಾ ಈ ಸಲಹೆಯನ್ನು ನೀಡಿದ್ದಾರೆ.

ಕೊರೊನಾದಂತೆ ಎ ಎಂ ಆರ್ ವೈರಸ್ ತಡೆಯಲು ಜನ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಮತ್ತು ಆಗಾಗ ಕೈ ತೊಳೆದುಕೊಳ್ಳಬೇಕು. ಇದರ ಜೊತೆಗೆ ಕಡ್ಡಾಯವಾಗಿ ಕೊರೊನಾ ನಿರೋಧಕ ಲಸಿಕೆ ಪಡೆಯಬೇಕು ಎಂದು ಡಾ. ಅನುಜ್ ಶರ್ಮಾ ಎಚ್ಚರಿಸಿದ್ದಾರೆ.

ಈ ಹೊಸ ಸೋಂಕು (ಎಎಂಆರ್ ) ಬ್ಯಾಕ್ಟೀರಿಯ ಮತ್ತು ವ್ಯಕ್ತಿಯ ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಒಬ್ಬ ವ್ಯಕ್ತಿಯಲ್ಲಿ ಎ.ಎಂ.ಆರ್ ಕಾಣಿಸಿಕೊಂಡರೆ ಆಂಟಿಬಯೋಟಿಕ್ ಸೇರಿದಂತೆ ಯಾವುದೇ ಮಾತ್ರೆ ,ಔಷಧಿಗಳು ಸಹ ಕೆಲಸ ಮಾಡುವುದಿಲ್ಲ. ಹೀಗಾಗಿ ಎಎಂಆರ್ ನಿಂದ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಡಬ್ಲ್ಯೂ ಎಚ್ಒ ತಿಳಿಸಿದೆ.

ಕೊರೊನಾ
ಸೋಂಕಿತರಿಗೆ, ಅದರಲ್ಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಅತಿ ವೇಗವಾಗಿ ಎ ಎಂ ಆರ್ ತಗಲುವ ಸಾಧ್ಯತೆ ಇದೆ ಎಂದು ಅಮೆರಿಕಾದ ರೋಗ ನಿಯಂತ್ರಣ ಕೇಂದ್ರ(ಸಿಡಿಸಿ) ವೈದ್ಯರು ತಿಳಿಸಿದ್ದಾರೆ.

“ಕೊರೊನಾ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಅಲ್ಲದೆ, ವೈದ್ಯರು ಅವರಿಗೆ ಅತಿಯಾದ ಆಂಟಿಬಯೋಟಿಕ್ಸ್ ನೀಡುವುದರಿಂದ ವ್ಯಕ್ತಿಯ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಇದರ ಜೊತೆಗೆ ಗಂಭೀರವಾಗಿ ಅನಾರೋಗ್ಯಕ್ಕೊಳಗಾದ ವ್ಯಕ್ತಿಯಿಂದ ಪರ್ಯಾಯ ವೈರಸ್ ಸೃಷ್ಟಿಯಾಗುತ್ತದೆ. ಈ ವೈರಾಣುವೇ ಎಎಂಆರ್ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...