Friday, April 3, 2026
Friday, April 3, 2026

ಎಂ-ಸ್ಯಾಂಡ್ ಬಂತು : ನದಿ ಮರಳಿಗೆ ಬೆಲೆ ಇಲ್ಲ

Date:

ರಾಜ್ಯದಲ್ಲಿ ಮರಳಿನ ಬೇಡಿಕೆ ಮತ್ತು ಪೂರೈಕೆ ವ್ಯವಸ್ಥೆಗಳೇ ಕೃತಕ ಅಭಾವ ಸೃಷ್ಟಿಸಿ ವ್ಯವಹಾರ ಕುದುರಿಸುವ ಕಾರಣದಿಂದ ದರ ಗಗನಕ್ಕೇರಿದೆ. ಈ ವ್ಯಾಪಾರ ದಂದೆಯಾಗಿ ಮಾರ್ಪಟ್ಟಿದೆ. ನಿರ್ಮಾಣ ವಲಯ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.
ನದಿ ಮರಳಿನಿಂದ ಬೇಡಿಕೆ ನೀಗಿಸಲು ಎಂ-ಸ್ಯಾಂಡ್ ಪರ್ಯಾಯ ಆಯ್ಕೆಯಾಗಿದೆ. ನಿರ್ಮಾಣ ವಲಯ ಈಗ ನದಿ ಮರಳು ಆಶ್ರಯಿಸಿಲ್ಲ ಎಂದು ಭಾರತೀಯ ಬಿಲ್ಡರ್ ಗಳ ಒಕ್ಕೂಟದ ಅಧ್ಯಕ್ಷರಾಗಿರುವ ಜಿ.ಎಂ.ರವೀಂದ್ರ ಅವರು ತಿಳಿಸಿದ್ದಾರೆ.
2018ರಲ್ಲಿ 11 ಕೋಟಿ ರೂಪಾಯಿ ಹೂಡಿಕೆ ಮಾಡಿ ಮಲೇಷಿಯಾದಿಂದ 56,400 ಟನ್ ಮರಳನ್ನು ನವ ಮಂಗಳೂರು ಬಂದರಿಗೆ ತರಿಸಿದ್ದೆವು. ಟನ್ ಗೆ 2,200ರೂ. ವೆಚ್ಚವಾಗಿದೆ. ಬೇಡಿಕೆ ಇಲ್ಲದ್ದರಿಂದ ಟನ್ ಗೆ 1,400ಕ್ಕೆ ಮಾರಿದೆವು. ಅಷ್ಟೂ ಮರಳು ಖಾಲಿ ಮಾಡಲು ಎರಡು ವರ್ಷ ಬೇಕಾಯಿತು. 5ಕೋಟಿ ರೂ. ನಷ್ಟ ಆಗಿದೆ ಎಂದು ಮರಳು ಆಮದು ಮಾಡಿದ್ದ ಚೆನ್ನೈನ ಇಂಟಿಗ್ರೇಟೆಡ್ ಸರ್ವಿಸ್ ಪಾಯಿಂಟ್ ಕಂಪನಿಯ ನಿರ್ದೇಶಕರೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ಗುರುತಿಸಿದ ನೈಸರ್ಗಿಕ ಮರುಳು ನಿಕ್ಷೇಪಗಳ ಪೈಕಿ 251ನ್ನು ಹರಾಜು ಮಾಡಲಾಗಿದೆ. ಉಳಿದ 102 ನಿಕ್ಷೇಪಗಳನ್ನು ಸರ್ಕಾರಿ ಸ್ವಾಮ್ಯದ ಹಟ್ಟಿ ಚಿನ್ನದ ಗಣಿ (ಎಚ್ ಜಿಎಂಲ್) ಮತ್ತು ಕರ್ನಾಟಕ ರಾಜ್ಯ ಖನಿಜ ನಿಗಮಕ್ಕೆ ವಹಿಸಿ ಗ್ರಾಹಕರಿಗೆ ಪೂರೈಸಲು ಹೊಸ ಮರಳು ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ.
ಮರಳು ಗಣಿಗಾರಿಕೆಗೆ ಗುತ್ತಿಗೆ ಪಡೆದ ಸಂಸ್ಥೆಗಳ ಅವಧಿ ಮುಗಿದ ಬಳಿಕ ಆ ನಿಕ್ಷೇಪಗಳಲ್ಲಿ ಮರಳು ಗಣಿಗಾರಿಕೆ ಮತ್ತು ಸಾಗಣೆ ಹೊಣೆಯನ್ನು ಈ ಸಂಸ್ಥೆಗಳೇ ವಹಿಸಿಕೊಳ್ಳಲಿದೆ ಎಂಬ ಮಾಹಿತಿ ದೊರೆತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...