Saturday, December 6, 2025
Saturday, December 6, 2025

ನ್ಯಾಯಮೂರ್ತಿಗಳ ಸಮ್ಮುಖ:ಲಿಖಿಂಪುರ -ಖೇರಿ ತನಿಖೆ

Date:

ಲಿಖಿಂಪುರ -ಖೇರಿ ಹಿಂಸಾಚಾರ ಪ್ರಕರಣದ ತನಿಖೆಯ ಉಸ್ತುವಾರಿಯನ್ನ ನಿವೃತ್ತ ನ್ಯಾಯಮೂರ್ತಿ ನಡೆಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಉತ್ತರ ಪ್ರದೇಶ ಸರ್ಕಾರ ಅದರ ಪಾಲನೆ ಮಾಡಲು ತನ್ನ ಸಮ್ಮತಿ ಸೂಚಿಸಿದೆ.
ವಿಶೇಷ ತನಿಖಾ ತಂಡವನ್ನು ( ಎಸ್ಐಟಿ) ಮೇಲ್ದರ್ಜೆಗೆ ಏರಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ನ್ಯಾಯಾಲಯವು ಸೂಚಿಸಿದೆ. ಉನ್ನತ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಲು ಹೇಳಿದೆ. ಉತ್ತರಪ್ರದೇಶ ಕೇಡರ್ ನ ಐಪಿಎಸ್ ಅಧಿಕಾರಿಗಳನ್ನು ನೇಮಿಸಬೇಕು. ಆದರೆ, ಅವರು ಮೂಲತಃ ಬೇರೆ ರಾಜ್ಯದವರಾಗಿರಬೇಕು ಎಂದು ತಿಳಿಸಿದೆ.
ನಾಲ್ವರು ರೈತರು ಮತ್ತು ಒಬ್ಬ ಪತ್ರಕರ್ತನ ಮೇಲೆ ಎಸ್ ಯುವಿ ವಾಹನ ಹರಿಸಿ ಹತ್ತಿ ಹಾಗೂ ನಂತರದ ಹಿಂಸಾಚಾರದಲ್ಲಿ ಮೂವರ ಹತ್ಯೆಯು ಅಕ್ಟೋಬರ್ 3ರಂದು ಲಿಖಿಂಪುರ -ಖೇರಿಯಲ್ಲಿ ನಡೆದಿತ್ತು.
ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಯೊಬ್ಬರನ್ನು ತನಿಖೆಯ ದಿನ ನಿತ್ಯದ ಪ್ರಗತಿಯ ಉಸ್ತುವಾರಿಗೆ ನೇಮಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಂ. ವಿ.ರಮಣ ಅವರ ನೇತೃತ್ವದ ಪೀಠವು ಹೇಳಿದೆ.
ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್ ಇದೇ 8 ರಂದು ತರಾಟೆಗೆ ತೆಗೆದುಕೊಂಡಿತ್ತು. ಪಂಜಾಬ್-ಹರಿಯಾಣ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯನ್ನು ತನಿಖೆಯ ಪ್ರಗತಿಯ ಮೇಲೆ ನಿಗಾ ಇರಿಸಲು ನೇಮಿಸುವ ಪ್ರಸ್ತಾಪವನ್ನೂ ಮುಂದಿಟ್ಟಿತ್ತು.
ಪ್ರಕರಣದ ಪ್ರಮುಖ ಆರೋಪಿ ಯೊಬ್ಬರನ್ನು ರಕ್ಷಿಸುವುದಕ್ಕಾಗಿಯೇ ಸಾಕ್ಷ್ಯ ಸಂಗ್ರಹ ಮಾಡಿದಂತಿದೆ ಎಂದು ಅತೃಪ್ತಿ ವ್ಯಕ್ತಪಡಿಸಿತ್ತು. ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ, ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೀಗೆ ಹೇಳಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...