Friday, April 3, 2026
Friday, April 3, 2026

ಚಾಲನಾಪತ್ರ ನೀಡುವಾಗ ಕಾಯಿದೆ ಪಾಲಿಸಿ

Date:

ವಾಹನ ಚಾಲನಾ ಪರವಾನಗಿ ನೀಡಲು ಅಗತ್ಯ ಪರೀಕ್ಷೆ ನಡೆಸುವಾಗ ‘ಮೋಟಾರು ವಾಹನ ಕಾಯಿದೆ – 1986’ ರ ಸೆಕ್ಷನ್ 15 (2) ಕಟ್ಟುನಿಟ್ಟಾಗಿ ಪಾಲಿಸುವಂತೆ ಹೈಕೋರ್ಟ್ ಸಾರಿಗೆ ಇಲಾಖೆಗೆ ಆದೇಶಿಸಿದೆ.
ಎಸ್. ಗೌರಿಶಂಕರ್ ಸಲ್ಲಿಸಿದ್ದ ಪಿಐಎಲ್ ಕುರಿತು ಮುಖ್ಯ ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆಯನ್ನು ನಡೆಸಿತು.
ಅರ್ಜಿದಾರ ಎಸ್.ಗೌರಿಶಂಕರ್ ಖುದ್ದು ವಾದ ಮಂಡಿಸಿ, ವಾಹನ ಚಾಲನಾ ಪರವಾನಗಿ ನೀಡುವ ಮೊದಲು ನಡೆಸುವ ಪರೀಕ್ಷೆಗಳಲ್ಲಿ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 15ರ ನಿಯಮ ಪಾಲನೆ ಆಗುತ್ತಿಲ್ಲ. ವಾಹನ ಚಾಲನೆಯಲ್ಲಿ ಪಕ್ವತೆ ಪಡೆದುಕೊಳ್ಳದವರಿಗೂ ಪರವಾನಗಿ ನೀಡಲಾಗುತ್ತಿದೆ. ಒಂದು ಕೇಂದ್ರದಲ್ಲಿ ದಿನಕ್ಕೆ 200 ಮಂದಿಗೆ ಪರೀಕ್ಷೆ ನಡೆಸಲಾಗುತ್ತದೆ. ಇದು ಪ್ರಯೋಗಿಕವಾಗಿ ಸಾಧುವಲ್ಲ. ಹಾಗಾಗಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ವಾದ ಪ್ರತಿವಾದ ಆಲಿಸಿದ ಪೀಠ, ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಅದನ್ನು ನಂಬದೇ ಇರಲು ಸಾಧ್ಯವಿಲ್ಲ. ಅದಾಗ್ಯೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 15 (2) ರೈ ಅನ್ವಯ ನೋಂದಣಿ ಪುಸ್ತಕ ನಿರ್ವಹಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನಿರ್ದೇಶನ ನೀಡುತ್ತೇವೆ ಎಂದು ಆದೇಶಿಸಿ ಅರ್ಜಿ ಇತ್ಯರ್ಥ ಪಡಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...