Thursday, February 5, 2026
Thursday, February 5, 2026

ಚಾಲನಾಪತ್ರ ನೀಡುವಾಗ ಕಾಯಿದೆ ಪಾಲಿಸಿ

Date:

ವಾಹನ ಚಾಲನಾ ಪರವಾನಗಿ ನೀಡಲು ಅಗತ್ಯ ಪರೀಕ್ಷೆ ನಡೆಸುವಾಗ ‘ಮೋಟಾರು ವಾಹನ ಕಾಯಿದೆ – 1986’ ರ ಸೆಕ್ಷನ್ 15 (2) ಕಟ್ಟುನಿಟ್ಟಾಗಿ ಪಾಲಿಸುವಂತೆ ಹೈಕೋರ್ಟ್ ಸಾರಿಗೆ ಇಲಾಖೆಗೆ ಆದೇಶಿಸಿದೆ.
ಎಸ್. ಗೌರಿಶಂಕರ್ ಸಲ್ಲಿಸಿದ್ದ ಪಿಐಎಲ್ ಕುರಿತು ಮುಖ್ಯ ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆಯನ್ನು ನಡೆಸಿತು.
ಅರ್ಜಿದಾರ ಎಸ್.ಗೌರಿಶಂಕರ್ ಖುದ್ದು ವಾದ ಮಂಡಿಸಿ, ವಾಹನ ಚಾಲನಾ ಪರವಾನಗಿ ನೀಡುವ ಮೊದಲು ನಡೆಸುವ ಪರೀಕ್ಷೆಗಳಲ್ಲಿ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 15ರ ನಿಯಮ ಪಾಲನೆ ಆಗುತ್ತಿಲ್ಲ. ವಾಹನ ಚಾಲನೆಯಲ್ಲಿ ಪಕ್ವತೆ ಪಡೆದುಕೊಳ್ಳದವರಿಗೂ ಪರವಾನಗಿ ನೀಡಲಾಗುತ್ತಿದೆ. ಒಂದು ಕೇಂದ್ರದಲ್ಲಿ ದಿನಕ್ಕೆ 200 ಮಂದಿಗೆ ಪರೀಕ್ಷೆ ನಡೆಸಲಾಗುತ್ತದೆ. ಇದು ಪ್ರಯೋಗಿಕವಾಗಿ ಸಾಧುವಲ್ಲ. ಹಾಗಾಗಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ವಾದ ಪ್ರತಿವಾದ ಆಲಿಸಿದ ಪೀಠ, ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಅದನ್ನು ನಂಬದೇ ಇರಲು ಸಾಧ್ಯವಿಲ್ಲ. ಅದಾಗ್ಯೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 15 (2) ರೈ ಅನ್ವಯ ನೋಂದಣಿ ಪುಸ್ತಕ ನಿರ್ವಹಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನಿರ್ದೇಶನ ನೀಡುತ್ತೇವೆ ಎಂದು ಆದೇಶಿಸಿ ಅರ್ಜಿ ಇತ್ಯರ್ಥ ಪಡಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕದಲ್ಲಿ ಅಭಿನಯಿಸಲು ಅರ್ಜಿ ಸಲ್ಲಿಸಿದವರಿಗೆ ಸಂದರ್ಶನಕ್ಕೆ ಕರೆ.

Shivamogga Rangayana ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್...

JCI Shivamogga ಜೆಸಿಐ ಚಿರಂತನ ಅಧ್ಯಕ್ಷರಾಗಿ ಪೃಥ್ವಿ ನಾಗರಾಜ್ ಆಯ್ಕೆ.

JCI Shivamogga ಶಿವಮೊಗ್ಗ ನಗರದ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ...

Social Welfare Department ಶುಲ್ಕ ಮರುಪಾವತಿ ಯೋಜನೆ ಸೌಲಭ್ಯ.ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Social Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು...