Sunday, December 14, 2025
Sunday, December 14, 2025

ಮಾಜಿ ಸಿ. ಎಂ.ಆಸ್ತಿ ಕೇವಲ ಒಂದೇಮನೆ

Date:

ಅಪ್ಪಟ ಗಾಂಧಿವಾದಿ,ಸರಳತೆಯಲ್ಲೇ ಜೀವನ ಸಾಗಿಸಿದವರು, ಸಿದ್ದವನಹಳ್ಳಿ ನಿಜಲಿಂಗಪ್ಪ.
ದಿವಂಗತ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ನಿವಾಸವನ್ನು ಸ್ವಾಧೀನಪಡಿಸಿಕೊಂಡು ಅವರ ಮನೆಯನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.

ಇಂತಹ ಅಪೂರ್ವ ವ್ಯಕ್ತಿಯ ಆದರ್ಶಗಳು ಅನುಕರಣೀಯ. ಅವರು ಬಾಳಿದ ಮನೆಯನ್ನ ಸ್ಮಾರಕವಾಗಿಸಲು ಸಾರ್ವಜನಿಕರ ಒತ್ತಾಯವಿತ್ತು.
ಅದಕ್ಕೆ ಪೂರಕವಾಗಿ
ವಿಧಾನ ಪರಿಷತ್ ಸದಸ್ಯ ಶ್ರೀ ಮೋಹನ್ ಕೊಂಡಜ್ಜಿ ಸರ್ಕಾರದ ಗಮನ ಸೆಳೆದು ಪತ್ರವನ್ನೂ ಬರೆದಿದ್ದರು.

ಎಸ್ ನಿಜಲಿಂಗಪ್ಪ ಅವರ ನಿವಾಸ ಚಿತ್ರದುರ್ಗದಲ್ಲಿದೆ. ದಶಕಗಳಿಂದ ಅಲ್ಲಿನ ಜನರು ನಿಜಲಿಂಗಪ್ಪ ಅವರ ಮನೆಯನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಬೇಡಿಕೆಯನ್ನು ಇಟ್ಟಿದ್ದರು. ಈಗ ಅವರ ಬೇಡಿಕೆಗೆ ಕೇಂದ್ರ ಸರ್ಕಾರವು ಮನ್ನಣೆಯನ್ನು ನೀಡಿದೆ.

ಎಸ್ ನಿಜಲಿಂಗಪ್ಪ ಅವರ ಮೊಮ್ಮಗನಿಂದ ಮನೆ ಖರೀದಿಸಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಐದು ಕೋಟಿ ರೂಗಳನ್ನು ಮಂಜೂರು ಮಾಡಲಾಗಿದೆ. ಅದರಲ್ಲಿ ಎರಡು ಕೋಟಿ ರೂಗಳನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಲಾಗಿದೆ.

ಎಸ್ ನಿಜಲಿಂಗಪ್ಪ ಸಮಾಧಿ ಸಮಿತಿಯ ಸದಸ್ಯರಾದ ಎಂ. ಎಲ್.ಸಿ ಮೋಹನ್ ಕೊಂಡಜ್ಜಿ ಅವರು ಮಾತನಾಡಿ ಸುಮಾರು ಎಂಟು ವರ್ಷಗಳ ಕಾಲ ಸಿಎಂ ಆಗಿದ್ದ ನಿಜಲಿಂಗಪ್ಪ ಅವರು ಕೇವಲ ಒಂದೇ ಒಂದು ಆಸ್ತಿಯನ್ನು ಹೊಂದಿದ್ದರು. ಅದು ಅವರ ಮನೆ ಮಾತ್ರ. ಚಿತ್ರದುರ್ಗದ ಜನರ ಒತ್ತಾಯದ ಮೇರೆಗೆ ನಾನು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಅವರ ನಿವಾಸ ಸ್ಮರಣೀಯವಾಗಲಿರುವುದು ಸಂತಸದ ವಿಚಾರ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...