Tuesday, December 16, 2025
Tuesday, December 16, 2025

ಮಾಜಿ ಸಿ. ಎಂ.ಆಸ್ತಿ ಕೇವಲ ಒಂದೇಮನೆ

Date:

ಅಪ್ಪಟ ಗಾಂಧಿವಾದಿ,ಸರಳತೆಯಲ್ಲೇ ಜೀವನ ಸಾಗಿಸಿದವರು, ಸಿದ್ದವನಹಳ್ಳಿ ನಿಜಲಿಂಗಪ್ಪ.
ದಿವಂಗತ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ನಿವಾಸವನ್ನು ಸ್ವಾಧೀನಪಡಿಸಿಕೊಂಡು ಅವರ ಮನೆಯನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.

ಇಂತಹ ಅಪೂರ್ವ ವ್ಯಕ್ತಿಯ ಆದರ್ಶಗಳು ಅನುಕರಣೀಯ. ಅವರು ಬಾಳಿದ ಮನೆಯನ್ನ ಸ್ಮಾರಕವಾಗಿಸಲು ಸಾರ್ವಜನಿಕರ ಒತ್ತಾಯವಿತ್ತು.
ಅದಕ್ಕೆ ಪೂರಕವಾಗಿ
ವಿಧಾನ ಪರಿಷತ್ ಸದಸ್ಯ ಶ್ರೀ ಮೋಹನ್ ಕೊಂಡಜ್ಜಿ ಸರ್ಕಾರದ ಗಮನ ಸೆಳೆದು ಪತ್ರವನ್ನೂ ಬರೆದಿದ್ದರು.

ಎಸ್ ನಿಜಲಿಂಗಪ್ಪ ಅವರ ನಿವಾಸ ಚಿತ್ರದುರ್ಗದಲ್ಲಿದೆ. ದಶಕಗಳಿಂದ ಅಲ್ಲಿನ ಜನರು ನಿಜಲಿಂಗಪ್ಪ ಅವರ ಮನೆಯನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಬೇಡಿಕೆಯನ್ನು ಇಟ್ಟಿದ್ದರು. ಈಗ ಅವರ ಬೇಡಿಕೆಗೆ ಕೇಂದ್ರ ಸರ್ಕಾರವು ಮನ್ನಣೆಯನ್ನು ನೀಡಿದೆ.

ಎಸ್ ನಿಜಲಿಂಗಪ್ಪ ಅವರ ಮೊಮ್ಮಗನಿಂದ ಮನೆ ಖರೀದಿಸಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಐದು ಕೋಟಿ ರೂಗಳನ್ನು ಮಂಜೂರು ಮಾಡಲಾಗಿದೆ. ಅದರಲ್ಲಿ ಎರಡು ಕೋಟಿ ರೂಗಳನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಲಾಗಿದೆ.

ಎಸ್ ನಿಜಲಿಂಗಪ್ಪ ಸಮಾಧಿ ಸಮಿತಿಯ ಸದಸ್ಯರಾದ ಎಂ. ಎಲ್.ಸಿ ಮೋಹನ್ ಕೊಂಡಜ್ಜಿ ಅವರು ಮಾತನಾಡಿ ಸುಮಾರು ಎಂಟು ವರ್ಷಗಳ ಕಾಲ ಸಿಎಂ ಆಗಿದ್ದ ನಿಜಲಿಂಗಪ್ಪ ಅವರು ಕೇವಲ ಒಂದೇ ಒಂದು ಆಸ್ತಿಯನ್ನು ಹೊಂದಿದ್ದರು. ಅದು ಅವರ ಮನೆ ಮಾತ್ರ. ಚಿತ್ರದುರ್ಗದ ಜನರ ಒತ್ತಾಯದ ಮೇರೆಗೆ ನಾನು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಅವರ ನಿವಾಸ ಸ್ಮರಣೀಯವಾಗಲಿರುವುದು ಸಂತಸದ ವಿಚಾರ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...