Friday, April 3, 2026
Friday, April 3, 2026

ಲಸಿಕೆ ಪೂರ್ಣಗೊಂಡ ಮನೆಗೆ ಸ್ಟಿಕ್ಕರ್

Date:

ಕೋವಿಡ್ ನಿರೋಧಕ ಲಸಿಕೆ ಅಭಿಯಾನ ತೀವ್ರ ಗತಿಯಲ್ಲಿ ಮುಂದುವರಿಯಬೇಕು. ಹಾಗಾಗಿ ಎರಡೂ ಡೋಸ್ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕ್ಕರ್ ಅಂಟಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಲಹೆ ನೀಡಿದ್ದಾರೆ.
ಲಸಿಕೆ ಅಭಿಯಾನ ಇನ್ನೊಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜೊತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಮಾಲೋಚನೆ ನಡೆಸಿದರು.
ಮನೆ ಬಾಗಿಲಿಗೆ ಲಸಿಕೆ ಕೊಂಡೊಯ್ಯುವ ‘ಹರ್ ಘರ್ ದಸ್ತಕ್’ ಅಭಿಯಾನದ ಕುರಿತು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು.
ಕೋವಿಡ್ ಬಿಕ್ಕಟ್ಟು ನಿಭಾಯಿಸುವ ವಿಷಯದಲ್ಲಿ ಭಾರತ ಸರಿಸಾಟಿ ಇಲ್ಲದ ಸಾಧನೆ ಮಾಡಿದೆ. ಲಾಕ್ ಡೌನ್ ಸಂದರ್ಭ ಯಾರೊಬ್ಬರು ಉಪವಾಸ ಬೀಳದಂತೆ ನೋಡಿಕೊಂಡಿದ್ದು ನಮ್ಮ ಸರ್ಕಾರದ ಹೆಗ್ಗಳಿಕೆ. ಇದರಲ್ಲಿ ಎನ್ ಜಿಒ ಮತ್ತು ನಾಗರಿಕ ಸಂಘ ಸಂಸ್ಥೆಗಳ ಪಾಲು ದೊಡ್ಡದಿದೆ. ಭಾರತದಂತಹ ಬೃಹತ್ ರಾಷ್ಟ್ರದಲ್ಲಿ ಮನೆಬಾಗಿಲಿಗೆ ಲಸಿಕೆ ತಲುಪಿಸುವುದು ಸಾಹಸದ ಕೆಲಸವೇ ಸರಿ. ಇದರಲ್ಲಿ ಜನರು ಕೂಡ ಮುತುವರ್ಜಿ ವಹಿಸಬೇಕು.
ಎರಡೂ ಡೋಸ್ ಪೂರೈಸಿದವರ ಪ್ರಮಾಣ ಶೇಕಡ 40ರಷ್ಟು ದಾಟಿದೆ. ಈ ಸಾಧನೆಗೆ ಎಲ್ಲರ ಸಹಭಾಗಿತ್ವವೇ ಕಾರಣ.
ಆದರೂ ಸಂಕ್ರಾಮಿಕ ರೋಗ ಸಂಪೂರ್ಣ ಅಂತ್ಯಗೊಳ್ಳಬೇಕಾದರೆ ಶೇ.100ರಷ್ಟು ಲಸಿಕೆ ಪೂರೈಸುವುದು ಅನಿವಾರ್ಯ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...