Tuesday, February 3, 2026
Tuesday, February 3, 2026

ಬೆಂಗಳೂರು ಟೆಕ್ ಸಮಾವೇಶ : ವಿಶೇಷತೆಗಳು

Date:

ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಶೃಂಗದ 24ನೇ ವರ್ಷದ ಮೂರು ದಿನಗಳ ಸಮಾವೇಶವು ಇಂದಿನಿಂದ ಆರಂಭಗೊಳ್ಳಲಿದೆ. ತಂತ್ರಜ್ಞಾನ ವಿಲ್ಲದೆ ಬದುಕಿನ ಕಲ್ಪನೆಯು ಸಾಧ್ಯವಿಲ್ಲ. ಇದರ ಲಾಭ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಈ ದೇಶದಿಂದ ಶೃಂಗ ಸಮಾವೇಶವನ್ನು ಏರ್ಪಡಿಸಲಾಗಿದೆ.
‘ತಾಜ್ ವೆಸ್ಟ್ ಎಂಡ್’ ಹೋಟೆಲ್ ನಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಶೃಂಗದಲ್ಲಿ 30ಕ್ಕೂ ಹೆಚ್ಚು ದೇಶಗಳು ಭಾಗವಹಿಸಲಿವೆ.
300ಕ್ಕೂ ಹೆಚ್ಚು ಕಂಪನಿಗಳು, 5ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದಲ್ಲಿ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಡ್ರೈವಿಂಗ್ ದಿ ನೆಕ್ಸ್ಟ್ ಘೋಷವಾಕ್ಯದಡಿ ನಡೆಯಲಿರುವ ಈ ಶೃಂಗದಲ್ಲಿ ಪ್ರಧಾನವಾಗಿ ಐಟಿ,ಬಿಟಿ, ಕೃಷಿ, ಆರೋಗ್ಯ, ಸೈಬರ್ ಸೆಕ್ಯೂರಿಟಿ, ಲಸಿಕೆ, ವೈದ್ಯಕೀಯ ಮತ್ತು ಆರ್ಥಿಕ ತಂತ್ರಜ್ಞಾನಗಳಿಗೆ ಒತ್ತು ಕೊಡಲಾಗಿದೆ.
ತಂತ್ರಜ್ಞಾನದಲ್ಲಿ ಪಾರಮ್ಯ ಹೊಂದಿರುವ ಬೆಂಗಳೂರಿನ ಸಾಧನೆಯನ್ನು ಮತ್ತಷ್ಟು ವಿಸ್ತರಿಸುವ ಗುರಿಯಿಂದ ಶೃಂಗದಲ್ಲಿ ಪ್ರತ್ಯೇಕವಾಗಿ ‘ಬೆಂಗಳೂರು ನೆಕ್ಸ್ಟ್’ ನಾವಿನ್ಯತೆ ಮತ್ತು ನಾಯಕತ್ವ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ.
ನಾಲ್ಕು ವೇದಿಕೆಗಳಲ್ಲಿ ಒಟ್ಟು 75 ಗೋಷ್ಠಿ ಮತ್ತು 7 ಸಂವಾದ ನಡೆಯಲಿದೆ.
ಈ ಶೃಂಗವು ಭಾರತ ಮತ್ತು ಅಮೆರಿಕ ಸಮಾವೇಶವಾಗಿದೆ.
ಗ್ರಾಮೀಣ ಐಟಿ ಮತ್ತು ಬಯೋ ಕ್ವಿಜ್ ನಡೆಯಲಿದೆ.
ವಿಜ್ಞಾನ ಗ್ಯಾಲರಿ, ಸ್ಟಾರ್ಟಪ್ ಯೂನಿಕಾರ್ನ್ ಕಂಪನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಇದು ಜಾಗತಿಕ ನಾವೀನ್ಯತಾ ಮೈತ್ರಿಕೂಟ ವಾಗಿದೆ.
ಎಸ್ಟಿ ಪಿಐ / ಐಟಿ ರಫ್ತು ಪ್ರಶಸ್ತಿ-ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.
ವರ್ಚುವಲ್ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. 320ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳುತ್ತಿವೆ. ಇವುಗಳ ಪೈಕಿ ರಾಜ್ಯ ಸರ್ಕಾರದ ‘ಎಲಿವೇಟ್’ ಯೋಜನೆಯಡಿ ಆಯ್ಕೆಯಾಗಿರುವ 100 ಮಳಿಗೆಗಳಿರಲಿವೆ. ಆಸಕ್ತರು ಲಿಂಕ್ ಮೂಲಕ ನೋಂದಣಿ ಮಾಡಿಕೊಂಡು ಸಮಾವೇಶ ವೀಕ್ಷಿಸಬಹುದಾಗಿದೆ.

ಲಿಂಕ್ :https://www.bengalurutechsummit.com/web/it_forms/registration & conference.php

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...