Monday, March 24, 2025
Monday, March 24, 2025

ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿ: ಪ್ರಗತಿಗೆ ಬೆಸುಗೆ

Date:

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದ್ದಾರೆ.

2017ರಲ್ಲಿ ಉತ್ತರಪ್ರದೇಶದಲ್ಲಿ 6 ಹೆದ್ದಾರಿಗಳನ್ನು ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿತ್ತು. ಈ ಪೈಕಿ ಉತ್ತರಪ್ರದೇಶದ ಪೂರ್ವಾಂಚಲ ಹೆದ್ದಾರಿಯು ಉದ್ಘಾಟನೆಯಾದ ಮೊದಲ ಯೋಜನೆಯಾಗಿದೆ.

ಪೂರ್ವಾಂಚಲ್ ಎಕ್ಸ್ ಪ್ರೆಸ್ ಹೆದ್ದಾರಿಯ ಉದ್ಘಾಟನೆ ಬಳಿಕ, ಸುಲ್ತಾನ್ ಪುರದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದರು. “ಆರು ಪಥಗಳ ಪೂರ್ವಾಂಚಲ ಎಕ್ಸ್ಪ್ರೆಸ್ ಹೆದ್ದಾರಿಯು ಉತ್ತರ ಪ್ರದೇಶದ ಪೂರ್ವಭಾಗದ ಜೀವನಾಡಿಯಾಗಲಿದೆ. ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಕಾರಣವಾಗಲಿದೆ. ಹೆದ್ದಾರಿಯು ವಾಯುಪಡೆಗೆ ಶಕ್ತಿ ತುಂಬಲಿದೆ” ಎಂದು ಪ್ರಧಾನಿ ತಿಳಿಸಿದ್ದಾರೆ.

ಈ ಹೆದ್ದಾರಿಯು 341 ಕಿ. ಮೀ ಉದ್ದದ ಮಾರ್ಗವನ್ನು ಹೊಂದಿದೆ. 22,500 ಕೋಟಿ ವೆಚ್ಚವಾಗಿದೆ. ಉತ್ತರ ಪ್ರದೇಶದ ಪೂರ್ವ-ಪಶ್ಚಿಮ ಭಾಗಗಳಿಗೆ ನೇರ ಸಂಪರ್ಕವನ್ನು ಒದಗಿಸುತ್ತದೆ. ಲಖನೌ, ಗಾಜಿಪುರ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ. ಉತ್ತರಪ್ರದೇಶದ 8 ಜಿಲ್ಲೆಗಳಲ್ಲಿ ಈ ಮಾರ್ಗ ಹಾದು ಹೋಗುತ್ತದೆ.

ಈಗಾಗಲೇ ಇರುವ ಆಗ್ರಾ,ಲಖನೌ ಹೆದ್ದಾರಿಯನ್ನು ಇದು ಸಂಪರ್ಕಿಸುತ್ತದೆ. ರಾಜ್ಯದ ಪೂರ್ವ ಭಾಗವು ಪಶ್ಚಿಮ ಭಾಗದ ಜೊತೆ ಬೆಸೆಯುತ್ತದೆ.

ಈ ಭಾಗ ಬೃಹತ್ ಕೈಗಾರಿಕಾ ಕಾರಿಡಾರ್ ಆಗಿ ಬದಲಾಗಲಿದೆ. ಉದ್ಯೋಗದ ಅವಕಾಶಗಳು ಹೆಚ್ಚಲಿದೆ ಎಂದು ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

BJP Protest 18 ಶಾಸಕರ ಅಮಾನತು. ಸರ್ಕಾರದಿಂದ ಅಧಿಕಾರ ದುರುಪಯೋಗ. ಜಿಲ್ಲಾ ಬಿಜೆಪಿ‌‌ ಪ್ರತಿಭಟನೆ

BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ,...

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು...

World Tuberculosis Day ಕ್ಷಯರೋಗವು ಹರಡುವ ರೋಗ ಕುಟುಂಬಸ್ಥರು ಬಹಳ ಎಚ್ಚರದಿಂದಿರಬೇಕು- ಡಾ.ಕೆ. ಎಸ್.ನಟರಾಜ್

World Tuberculosis Day ಕ್ಷಯರೋಗ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಭಾರತ...

Thawar Chand Gehlot ರಾಜಭವನದಲ್ಲಿ ಸಂಭ್ರಮಿಸಿದ “ಚಂದನ” ದ ಚೈತ್ರಾಂಜಲಿ, ಯುಗಾದಿ ಶುಭಾಶಯ ಕೋರಿದ ರಾಜ್ಯಪಾಲ‌ ಗೆಹ್ಲೋಟ್

Thawar Chand Gehlot ಬೆಂಗಳೂರು 22.03.2025: ಹಿಂದುಗಳ ಹೊಸ ವರ್ಷವೆಂದೇ ಕರೆಯಲ್ಪಡುವ...