Friday, May 23, 2025
Friday, May 23, 2025

ಶಿವಮೊಗ್ಗ ನಾಗರಾಜ್ ಗೆ ಮತ್ತೊಂದು ಪ್ರಶಸ್ತಿಯ ಗರಿ

Date:

ಸಂಗೀತ, ನೃತ್ಯ, ನಾಟಕದಂತೆಯೇ ಫೋಟೋಗ್ರಫಿಗೂ ಕೂಡ ತನ್ನದೇ ಆದ ಮಹತ್ವವಿದೆ. ಫೋಟೋಗ್ರಫಿ ಎನ್ನುವುದು ಒಂದು ಅದ್ಭುತ ಕಲೆ. ಇದು ಸುಲಭವಾಗಿ ಎಲ್ಲರಿಗೂ ದಕ್ಕುವುದಿಲ್ಲ. ಈ ಸುಂದರ ಫೋಟೊಗ್ರಫಿ ಕಲೆಯ ಮಾಂತ್ರಿಕ ಶಿವಮೊಗ್ಗದ ನಾಗರಾಜ್. ಈಗಾಗಲೇ ಖ್ಯಾತ ವೃತ್ತಪತ್ರಿಕೆ ಗಳಲ್ಲಿ ಅವರ ಸಾವಿರಾರು ಛಾಯಾಚಿತ್ರಗಳು ನೋಡುಗರ ಕಣ್ಸೆಳೆದಿವೆ. ಛಾಯಾಚಿತ್ರ ಕಲೆಯನ್ನ ಕರಗತ ಮಾಡಿಕೊಂಡಿರುವ ನಾಗರಾಜ್ ಅವರನ್ನ ಈಗಾಗಲೇ ಹಲವು ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿವೆ. ಪ್ರಸ್ತುತ ಇವರು ಪುಣೆಯ ದ ಫೋಟೋಗ್ರಫಿಕ್ ಸೊಸೈಟಿ(ಪಿ.ಎಸ್.ಪಿ.) ಆಯೋಜಿಸಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪುರಸ್ಕೃತರಾಗಿದ್ದಾರೆ. ಪಿ.ಎಸ್.ಪಿ. ನಡೆಸಿದ ಈ ಸ್ಪರ್ಧೆಯಲ್ಲಿ ದೇಶದ ನೂರಾರು ಛಾಯಾ ಚಿತ್ರಗ್ರಾಹಕರು ಸ್ಪರ್ಧಿಸಿದ್ದರು. ಇವರಲ್ಲಿ ಶಿವಮೊಗ್ಗ ನಾಗರಾಜ್ ಎರಡನೇ ಬಹುಮಾನ ಪಡೆದಿದ್ದಾರೆ. ಪೆಂಡಮಿಕ್(ಸಾಂಕ್ರಾಮಿ ರೋಗಗಳು) ವಿಭಾಗದಲ್ಲಿ ಈ ಪ್ರಶಸ್ತಿ ಪಡೆದಿದ್ದು, ಮೆಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬನನ್ನು ಅವಸರವಾಗಿ ಆಸ್ಪತ್ರೆಗೆ ಸಾಗಿಸುವ ಮತ್ತು ಆ ವ್ಯಕ್ತಿಯ ಸಂಬಂಧಿಕರ ಆತಂಕದ ಚಿತ್ರವನ್ನು ಇವರು ಸೆರೆಹಿಡಿದಿದ್ದರು. ಇದೊಂದು ಮಾನವೀಯತೆಯ ಚಿತ್ರವಾಗಿತ್ತು. ಇದನ್ನು ಮಾನ್ಯ ಮಾಡಿದ ತೀರ್ಪುಗಾರರ ತಂಡವು ನಾಗರಾಜ್ ಅವರಿಗೆ ಈ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿಯ ಮೊತ್ತ ಹಾಗೂ ಪದಕವನ್ನು ನಾಗರಾಜ್ ಈಗಾಗಲೇ ಪಡೆದಿದ್ದಾರೆ. ಶಿವಮೊಗ್ಗ ನಾಗರಾಜ್ ಈಗಾಗಲೇ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಛಾಯಾಗ್ರಾಹಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಮತ್ತು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಈ ಹಿಂದೆ ನ್ಯೂಯಾರ್ಕ್, ನಾರ್ತ್ ಮೆಸಿಡೋನಿಯಾ, ಬಾಂಗ್ಲಾದೇಶ, ಶ್ರೀಲಂಕಾ, ಭಾರತ ಸೇರಿದಂತೆ ಹಲವು ಛಾಯಾಗ್ರಾಹಕ ಸಂಸ್ಥೆಗಳು ನಡೆಸಿದ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ ರಾಜ್ಯ, ರಾಷ್ಟ್ರಕ್ಕೂ ಗೌರವ ತಂದುಕೊಟ್ಟಿದ್ದಾರೆ. ನಾಗರಾಜ್ ಮೂಲತಃ ಪರಿಸರ ಛಾಯಾಗ್ರಾಹಕರಾಗಿದ್ದಾರೆ. ಪತ್ರಿಕೆಯಲ್ಲೂ ಕೆಲಸ ಮಾಡುತ್ತಿದ್ದಾರೆ. ಅವರು ತೆಗೆದ ಹಕ್ಕಿಗಳ ಫೋಟೋಗಳು ಯುಟ್ಯೂಬ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯೇಕ ಹೆಸರು ಮಾಡಿವೆ. ಅನೇಕ ಬಾರಿ ಛಾಯಾ ಚಿತ್ರ ಪ್ರದರ್ಶನ ನಡೆಸಿದ ನಾಗರಾಜ್ ಅವರ ಕ್ಯಾಮೆರಾದ ಕಣ್ಣಿನಲ್ಲಿ ಪ್ರೀತಿ, ಅಂತಃಕರಣ, ವಿಸ್ಮಯ ಚೆಲುವು, ಮಾನವೀಯತೆ ಬಡತನ, ರಾಜಕೀಯ ಸೇರಿದಂತೆ ಹಲವು ವಿಷಯ ಅಡಕವಾಗಿದ್ದು, ಇವರ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಅಭಿನಂದನೆ ಸಲ್ಲಿಸಿವೆ. ಫೋಟೋಗ್ರಫಿ ಕ್ಷೇತ್ರದಲ್ಲಿ ಇವರು ಮತ್ತಷ್ಟು ಎತ್ತರಕ್ಕೆ ಬೆಳೆಯಲ್ಲಿ ಎಂದು ಕೆ ಲೈವ್ ಬಳಗ ಹಾರೈಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bank of Baroda ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲವು ಹುದ್ದೆಗಳಿಗೆ ಮಾಜಿ ಸೈನಿಕರಿಂದಅರ್ಜಿ ಆಹ್ವಾನ

Bank of Baroda ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್...

Photography shimoga ಪರಿಶಿಷ್ಠ‌ ಜಾತಿ‌ಒಳ ಮೀಸಲಾತಿ‌ಆನ್ ಲೈನ್ ಮೂಲಕಸ್ಬಯಂಘೋಷಣೆಅಂತಿಮ ದಿನಾಂಕ ವಿಸ್ತರಣೆ

Photography shimoga ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ...

Department Of Pre-University Education ದ್ವಿತೀಯ ಪಿಯು 3 ನೇ ಪರೀಕ್ಷೆಗೆ ನೋಂದಣಿ. ವಿದ್ಯಾರ್ಥಿಗಳಿಗೆ ಮಾಹಿತಿ

Department Of Pre-University Education ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು...