Friday, April 3, 2026
Friday, April 3, 2026

ಬೆಂಗಳೂರು ತಂತ್ರಜ್ಞಾನದ ತೊಟ್ಟಿಲು: ಅಶ್ವತ್ಥನಾರಾಯಣ

Date:

ಬೆಂಗಳೂರು ತಂತ್ರಜ್ಞಾನ ಶೃಂಗ- 2021ರ ಕಾರ್ಯಕ್ರಮ ಕುರಿತಂತೆ ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು `ಕೋವಿಡ್ ಪಿಡುಗಿನ ನಂತರ ಅಭಿವೃದ್ಧಿಯ ಮಾನದಂಡಗಳು ಬದಲಾಗಿದ್ದು, ರಾಜ್ಯವು ಈ ಪರಿಸ್ಥಿತಿಯನ್ನು ತಂತ್ರಜ್ಞಾನದ ಬಲದಿಂದ ಸಕಾರಾತ್ಮಕವಾಗಿ ಬಳಸಿಕೊಳ್ಳುತ್ತಿದೆ’ ಎಂದರು.

ಉದ್ದಿಮೆಗಳ ಬೆಳವಣಿಗೆಗೆ ಸರಕಾರವು ಹಲವು ಅನುಕೂಲಕರ ನೀತಿಗಳನ್ನು ರೂಪಿಸಿದೆ. ಇದರಿಂದಾಗಿ ಐಟಿ, ಬಿಟಿ, ಯೂನಿಕಾರ್ನ್ ಉದ್ದಿಮೆಗಳಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ಮುಂಬರುವ ವರ್ಷಗಳಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನವೋದ್ಯಮಗಳ ಸ್ಥಾಪನೆಯಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಅಗ್ರಪಂಕ್ತಿಯಲ್ಲಿದೆ. ನೀತಿ ಆಯೋಗದ ಸಮೀಕ್ಷೆಯಲ್ಲಿ ರಾಜ್ಯವು ಸತತ ಎರಡನೇ ವರ್ಷವೂ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಐಟಿ ರಫ್ತಿನಲ್ಲಿ ಕರ್ನಾಟಕವು ದೇಶದ ಶೇ.40ರಷ್ಟು ಕೊಡುಗೆಯ ಸಿಂಹಪಾಲನ್ನು ನೀಡುತ್ತಿದೆ ಎಂಬುದರ ಬಗ್ಗೆ ಗಮನಸೆಳೆದರು.

ರಾಜ್ಯವು ಮುಂಬರುವ ದಿನಗಳಲ್ಲಿ ಬಯೋಎಕಾನಮಿಯಲ್ಲೂ ದೇಶಕ್ಕೆ ಅಗ್ರ ಸ್ಥಾನವನ್ನು ಅಲಂಕರಿಸುವಂತೆ ಮಾಡಲಿದೆ. ಜೀವವಿಜ್ಞಾನವನ್ನು ಉತ್ತೇಜಿಸಲು ಸದ್ಯದಲ್ಲೇ ಎಲಿಕ್ಸ್ ಪಾರ್ಕ್ ಸ್ಥಾಪನೆ ಮಾಡಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...