Sunday, April 19, 2026
Sunday, April 19, 2026

ಜ್ಞಾನದ ಬೆಳವಣಿಗೆಯಿಂದ ದೇಶದ ಸುಧಾರಣೆ : ಉಪರಾಷ್ಟ್ರಪತಿ

Date:

ಬೆಂಗಳೂರು: ಆಧುನಿಕ ತಂತ್ರಜ್ಞಾನ, ನಾವೀನ್ಯತೆ , ಸಂಶೋಧನೆ ಮತ್ತು ಜ್ಞಾನದ ಬೆಳವಣಿಗೆಗಳು ದೇಶದ ಕೃಷಿ ಸ್ಥಿತಿಯ ಸುಧಾರಣೆಗೆ ಒತ್ತು ಕೊಟ್ಟು ಮುನ್ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹೇಳಿದರು.

‘ಭವಿಷ್ಯವನ್ನು ಮುನ್ನಡೆಸು’ (ಡ್ರೈವಿಂಗ್ ದ ನೆಕ್ಸ್ಟ್) ಘೋಷವಾಕ್ಯದ 24ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ನವೆಂಬರ್ 17ರಂದು ಉದ್ಘಾಟಿಸಿ ಮಾತನಾಡಿದ ಅವರು, `ಐ.ಟಿ. ಮತ್ತು ಬಿ.ಟಿ.ಯೊಂದಿಗೆ ಎಲ್ಲರೂ ಕರ್ತವ್ಯಪ್ರಜ್ಞೆಯನ್ನು (ಡ್ಯೂಟಿ) ಮೈಗೂಡಿಸಿಕೊಂಡಾಗ ದೇಶವು ಶಕ್ತಿಶಾಲಿಯಾಗಿ (ಮೈಟಿ) ಹೊರಹೊಮ್ಮುತ್ತದೆ. ಕೃಷಿಯು ದೇಶದ ಪ್ರಧಾನ ಕಸುಬಾಗಿರುವುದರಿಂದ ತಾಂತ್ರಿಕತೆಯು ಅದಕ್ಕೆ ಪೂರಕವಾಗಿರಬೇಕು’ ಎಂದರು.

ಜಗತ್ತು ಈಗ ಜ್ಞಾನಾಧಾರಿತವಾಗಿ ರೂಪುಗೊಳ್ಳುತ್ತಿದ್ದು, ಕೋವಿಡ್ ನಂತರ ಡಿಜಿಟಲೀಕರಣಗೊಳ್ಳುತ್ತಿದೆ. ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರದ ನೀತಿಗಳು ಎಷ್ಟೇ ಚೆನ್ನಾಗಿದ್ದರೂ ಅಂತಿಮವಾಗಿ ತಂತ್ರಜ್ಞಾನದ ಲಾಭಗಳನ್ನು ಸಮಾಜದ ಕಟ್ಟಕಡೆಯ ಮನುಷ್ಯನಿಗೆ ತಲುಪಿಸಬೇಕಾದ್ದು ಮುಖ್ಯ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಇದನ್ನು ಸಾಧಿಸಿಕೊಂಡು ಬಂದಿದೆ. ತಂತ್ರಜ್ಞಾನದ ಮೂಲಕ ಇಡೀ ವ್ಯವಸ್ಥೆಯನ್ನು ಪರಿವರ್ತಿಸಬೇಕೆಂಬುದೇ ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯೂ ಆಗಿದೆ ಎಂದರು.

ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಖಾಸಗಿ ವಲಯದ ಪಾತ್ರ ಬಹುಮುಖ್ಯ. ಇದಕ್ಕೆ ಪೂರಕವಾಗಿ ಪ್ರಧಾನಿಯವರು `ಸುಧಾರಣೆ-ಸಾಧನೆ-ಪರಿವರ್ತನೆ’ ಎಂಬುದನ್ನೇ ಮಂತ್ರವಾಗಿಸಿಕೊಂಡು ನೀತಿಗಳನ್ನು ರೂಪಿಸುತ್ತಿದ್ದಾರೆ. ಜಗತ್ತಿನ ವಿಖ್ಯಾತ ಉದ್ದಿಮೆಗಳಲ್ಲೆಲ್ಲ ಭಾರತೀಯರು ನಾಯಕತ್ವ ವಹಿಸಿಕೊಂಡಿರುವುದು ಭಾರತೀಯರಾದ ನಮ್ಮ ಬೌದ್ಧಿಕ ಪ್ರಗತಿಯನ್ನು ದೃಢಪಡಿಸುತ್ತದೆ ಎಂದು ನಾಯ್ಡು ನುಡಿದರು.

ನಿರ್ದಿಷ್ಟವಾಗಿ ಬೆಂಗಳೂರು ಮತ್ತು ಒಟ್ಟಾರೆ ಭಾರತ ದೇಶವು ಅತ್ಯಂತ ಕ್ರಿಯಾಶೀಲವಾಗಿವೆ. ಇದಕ್ಕೆ ತಕ್ಕಂತೆ ಭಾರತದ ಪರಂಪರೆ ಮತ್ತು ಸಂಸ್ಕೃತಿಯ ಸಾರವಾದ `ಹಂಚಿಕೊಳ್ಳುವಿಕೆ ಮತ್ತು ಇನ್ನೊಬ್ಬರ ಬಗ್ಗೆ ಗಮನ ಹರಿಸುವಿಕೆ (ಕಾಳಜಿ)’ ಎರಡನ್ನೂ ನಾವು ತಂತ್ರಜ್ಞಾನದ ಧಾರೆಗಳ ಮೂಲಕ ಮುಂದುವರಿಸಿಕೊಂಡು ಹೋಗಬೇಕು. ತಾಂತ್ರಿಕತೆ ಹಾಗೂ ನಾವೀನ್ಯತೆಯು ಅಂತಿಮ ಸಮಾಜದಲ್ಲಿ ಸಂತೋಷವನ್ನುಂಟು ಮಾಡುವ ಉದ್ದೇಶ ಹೊಂದಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, `ಬೆಂಗಳೂರು ಮತ್ತು ಒಟ್ಟಾರೆಯಾಗಿ ರಾಜ್ಯದಲ್ಲಿ ಮನುಷ್ಯನ ಪ್ರತಿಭೆಯ ವಿಕಸನಕ್ಕೆ ತಕ್ಕ ವಾತಾವರಣವಿದ್ದು, ಉದ್ಯಮಗಳ ಬೆಳವಣಿಗೆಗೆ ಪೂರಕವಾದ ರಚನಾತ್ಮಕ ನೀತಿಗಳಿವೆ. ಪ್ರತಿಯೊಂದು ಉದ್ಯಮವನ್ನೂ ರಾಜ್ಯವು ಮುಕ್ತವಾಗಿ ಸ್ವಾಗತಿಸಲಾಗುವುದು’ ಎಂದರು.

ರಾಜ್ಯವು ಐಟಿ-ಬಿಟಿ ತಂತ್ರಜ್ಞಾನ, ಬಾಹ್ಯಾಕಾಶ, ವೈಮಾಂತರಿಕ್ಷ, ಸಂಶೋಧನೆ ಮತ್ತು ಅಭಿವೃದ್ಧಿ, ಸೆಮಿಕಂಡಕ್ಟರ್ ಹೀಗೆ ಎಲ್ಲದರಲ್ಲೂ ಇಡೀ ದೇಶಕ್ಕೇ ಅಗ್ರಸ್ಥಾನದಲ್ಲಿದೆ. ಇದರ ಜತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಯಲ್ಲೂ ಪ್ರಥಮ ಸ್ಥಾನದಲ್ಲಿದೆ. ಹೀಗಾಗಿ ರಾಜ್ಯವು ತಂತ್ರಜ್ಞಾನದ ಭವಿಷ್ಯದ ಬೆಳವಣಿಗೆಗೆ ಪ್ರಶಸ್ತ ತಾಣವಾಗಿದೆ ಎಂದು ವಿವರಿಸಿದರು.

ಹೊಸ ಕರ್ನಾಟಕದಿಂದ ಹೊಸ ಭಾರತವನ್ನು ಕಟ್ಟಬಹುದು. ಪ್ರಧಾನಿ ನೀಡಿರುವ ‘ಆತ್ಮನಿರ್ಭರ ಭಾರತ’ ನಿರ್ಮಾಣದ ಕನಸು ನನಸಾಗಬೇಕು. ಮೇಕ್ ಇನ್ ಕರ್ನಾಟಕ’ದ ಮೂಲಕ ನಾವು `ಮೇಕ್ ಇನ್ ಇಂಡಿಯಾ’ವನ್ನು ಸಾಕಾರಗೊಳಿಸಬೇಕು. ಯಶಸ್ಸು ಎಂಬುದು ಸಾಧನೆಯ ಒಂದಂಶ ಮಾತ್ರ. ಹೀಗಾಗಿ ಯಶಸ್ಸಿಗಿಂತ ಸಾಧನೆ ಮುಖ್ಯವಾಗಿದ್ದು, ತಂತ್ರಜ್ಞಾನ ವಲಯದಲ್ಲಿರುವವರು ಸಾಧನೆಯನ್ನೇ ಗುರಿಯಾಗಿಸಿಕೊಳ್ಳಬೇಕು. ತಂತ್ರಜ್ಞಾನವು ಕೊನೆಗೆ ಜನರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಅಭಿಪ್ರಾಯಪಟ್ಟರು.

ಉದ್ದಿಮೆಗಳ ಬೆಳವಣಿಗೆಗೆ ಸರಕಾರವು ಹಲವು ಅನುಕೂಲಕರ ನೀತಿಗಳನ್

ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್, ಐಟಿ, ಬಿಟಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ ಗಳ ಮುಖ್ಯಸ್ಥರಾದ ಕ್ರಮವಾಗಿ ಕ್ರಿಸ್ ಗೋಪಾಲಕೃಷ್ಣನ್, ಕಿರಣ್ ಮಜುಂದಾರ್ ಷಾ ಮತ್ತು ಪ್ರಶಾಂತ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ಕಿಂಡ್ರೆಲ್ ಕಂಪನಿಯ ಸಿಇಓ ಮಾರ್ಟಿನ್ ಶ್ರೋಟರ್ ಶೃಂಗವನ್ನು ಉದ್ದೇಶಿಸಿ ವರ್ಚುಯಲ್ ಮೂಲಕ ಮಾತನಾಡಿದರು.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕನ್ನಡದಲ್ಲೇ ಸರಾಗವಾಗಿ ತಮ್ಮ ಭಾಷಣ ಆರಂಭಿಸಿ, ಕೆಲಸಾಲುಗಳನ್ನು ಮಾತನಾಡಿ ಗಮನ ಸೆಳೆದರು. ಬಳಿಕ ಅವರು, ಇತ್ತೀಚೆಗೆ ಅಕಾಲಿಕವಾಗಿ ಅಗಲಿದ ಕನ್ನಡ ಚಿತ್ರರಂಗದ ಜನಪ್ರಿಯ ಮತ್ತು ಸಮಾಜಮುಖಿ ನಟ ಪುನೀತ್ ರಾಜಕುಮಾರ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...