Wednesday, October 2, 2024
Wednesday, October 2, 2024

ಪ್ರತಿಭಟನೆ ಹಿಂಪಡೆಯುವುದಿಲ್ಲ-ಟಿಕಾಯತ್

Date:

ದೇಶವ್ಯಾಪಿ ಕಳೆದ ಒಂದು ವರ್ಷದಿಂದ ಭಾರೀ ವಿವಾದವನ್ನು ಹುಟ್ಟುಹಾಕಿದ್ದ ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಮಾನ್ಯ ಪ್ರಧಾನ ಮಂತ್ರಿ ಅವರು ವಾಪಸ್ ಪಡೆಯುವುದಾಗಿ ಈಗಾಗಲೇ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ದೇಶದಾದ್ಯಂತ ರೈತರು ವಿರೋಧಿಸಿದ್ದರು. ಈ ಸಂಬಂಧ ಮೋದಿ ಅವರು “ಕಾಯ್ದೆಯ ಗುರಿಯು ಸಣ್ಣ ರೈತರನ್ನು ಬಲಪಡಿಸುವುದೇ ಆಗಿದೆ ಆದರೆ ಕೆಲವು ವರ್ಗದ ಕೃಷಿಕರನ್ನು ಮನವರಿಕೆ ಮಾಡಿಕೊಡಲು ಆಗಲಿಲ್ಲ. ನಾನು ಮತ್ತಷ್ಟು ಕಠಿಣವಾಗಿ ಶ್ರಮಿಸುತ್ತೇನೆ. ನಿಮ್ಮ ಕನಸುಗಳನ್ನು, ದೇಶದ ಕನಸುಗಳನ್ನು ಈಡೇರಿಸಲು ಸಾಧ್ಯ ಮಾಡುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ಕೃಷಿ ಕಾಯಿದೆ ಹಿಂಪಡೆಯುವ ಬಗ್ಗೆ ಪ್ರಧಾನಿಯವರ ನಿರ್ಧಾರ ತಿಳಿದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಪ್ರತಿಕ್ರಿಯಿಸಿದ್ದಾರೆ. “ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ. ಸಂಸತ್ತಿನಲ್ಲಿ ಈ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ಕಾಯುತ್ತೇವೆ” ಎಂದು ತಿಳಿಸಿದ್ದಾರೆ.

“ದೇಶದ ಅನ್ನದಾತರು ಸತ್ಯಾಗ್ರಹದ ಮೂಲಕ ದುರಹಂಕಾರವನ್ನು ಮಣಿಸಿದ್ದಾರೆ. ಅನ್ಯಾಯದ ವಿರುದ್ಧ ವಿಜಯಕ್ಕೆ ಅಭಿನಂದನೆಗಳು ಜೈಹಿಂದ್, ದೇಶದ ರೈತರಿಗೆ ಜೈ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಕೃಷಿ ಕಾಯ್ದೆ ಹಿಂಪಡೆ ಕುರಿತಂತೆ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ” ಎನ್ ಡಿ ಎ ಸರ್ಕಾರ ಸ್ಪಂದನಾಶೀಲ. ಹೀಗಾಗಿಯೇ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎನ್ನುವ ರೈತರ ಬೇಡಿಕೆಗಳಿಗೆ ಸ್ಪಂದಿಸಿದೆ. ಚುನಾವಣೆ ಉದ್ದೇಶಕ್ಕಾಗಿ ಕಾಯ್ದೆ ಹಿಂದಕ್ಕೆ ಪಡೆದಿಲ್ಲ” ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು “ಒಣ ಪ್ರತಿಷ್ಠೆಗೆ ಒಳಗಾಗದೇ ಕೃಷಿ ಕಾಯ್ದೆಗಳನ್ನು ಹಿಂಪಡೆದ ಮೋದಿ ನಿರ್ಧಾರ ಸ್ವಾಗತಾರ್ಹ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

“ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನ ಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ” ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕೃಷಿ ಕಾಯ್ದೆ ಹಿಂಪಡೆ ಕುರಿತಂತೆ ಪ್ರತಿಕ್ರಿಯಿಸಿದರು.

“ಮೋದಿ ಅವರ ಏಕಾಏಕಿ ನಿರ್ಧಾರದಲ್ಲಿ ವಿಶ್ವಾಸದ ಕೊರತೆ ಕಾಣುತ್ತಿದೆ. ಮೊದಲೇ ಸ್ಪಂದಿಸಿದ್ದರೆ ಮುಜುಗರ ಆಗುತ್ತಿರಲಿಲ್ಲ. ಚುನಾವಣೆಗಳ ಲಾಭ-ನಷ್ಟ ಇಟ್ಟುಕೊಂಡು ಅವರು ತೀರ್ಮಾನ ತೆಗೆದುಕೊಂಡಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೋದಿ ಅವರ ಈ ನಿರ್ಧಾರ ಕುರಿತು ಟೀಕಿಸಿದ್ದಾರೆ.

ಏನೇ ಆಗಲಿ ಒಂದು ವರ್ಷದಿಂದ ಮಳೆ, ಗಾಳಿ, ಚಳಿ ಎನ್ನದೇ ನಿರಂತರ ಹೋರಾಟ ಕೈಗೊಂಡಿದ್ದ ರೈತರಿಗೆ ಜಯ ಸಿಕ್ಕಂತಾಗಿದೆ. ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಘೋಷಿಸಿದ್ದ ಪ್ರಧಾನಿ ಮೋದಿ ಅವರ ನಿರ್ಧಾರದಿಂದ ದೇಶದಾದ್ಯಂತ ರೈತ ಸಂಘಟನೆಗಳಿಂದ ವಿಜಯೋತ್ಸವ ಆಚರಣೆ ನಡೆಯುತ್ತಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...