ಕೇಂದ್ರಾಡಳಿತ ಪ್ರದೇಶದ ಸರ್ಕಾರವು ಜನರನ್ನು ಸಬಲೀಕರಣಗೊಳಿಸಲು ಹೊಸ, ಪಾರದರ್ಶಕ ಮತ್ತು ಜನಕೇಂದ್ರಿತ ಆಡಳಿತ ವ್ಯವಸ್ಥೆಯನ್ನು ಸ್ಥಾಪಿಸಲು ಪ್ರಯತ್ನಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ.
ತಮ್ಮ ಭಾಷಣದಲ್ಲಿ ಜಮ್ಮು ಮತ್ತು ಕಾಶ್ಮೀರ ವಲಯದ ಆಡಳಿತಗಾರರ ಸಾಧನೆಗಳನ್ನು ಪಟ್ಟಿ ಮಾಡಿದ್ದಾರೆ. ತಮ್ಮ ‘ಆವಾಮ್ ಕಿ ಆವಾಜ್’ ರೇಡಿಯೋ ಕಾರ್ಯಕ್ರಮದ ಮಾಸಿಕ ಸಂಚಿಕೆಯಲ್ಲಿ ಮಾತನಾಡಿದರು. ಲೆಫ್ಟಿನೆಂಟ್ ಗವರ್ನರ್ ಅವರು ನೀಟ್ ( NEET- UG) ಪರೀಕ್ಷೆಯಲ್ಲಿ ರಾಷ್ಟ್ರೀಯ ಟಾಪರ್ ಆದ ತನ್ಮಯ್ ಗುಪ್ತಾ ಮತ್ತು ಕ್ರಿಕೆಟಿಗ ಉಮ್ರಾನ್ ಮಲಿಕ್ ಅವರನ್ನು ಅಭಿನಂದಿಸಿದರು.ಇವರು ಜಮ್ಮು ಮತ್ತು ಕಾಶ್ಮೀರದ ಯುವ ಪೀಳಿಗೆಗೆ ಹೊಸ ರೋಲ್ ಮಾಡೆಲ್ ಎಂದು ಕರೆದರು. ಸರ್ಕಾರದ ಹಲವಾರು ಮಹತ್ವದ ನಿರ್ಧಾರಗಳು ಜನರ ಸಬಲೀಕರಣವನ್ನು ಮುನ್ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರವನ್ನು ಅಭಿವೃದ್ಧಿ ಮತ್ತು ಸಮೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿವೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಮೊದಲ ಬಾರಿಗೆ 7000 ನೇಮಕಾತಿಗಳನ್ನು ಅರ್ಹತೆಯ ಆಧಾರದ ಮೇಲೆ ಪಾರದರ್ಶಕ ರೀತಿಯಲ್ಲಿ ಮಾಡಲಾಗಿದೆ ಎಂದರು.
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ನೇಮಕಾತಿ ಪರೀಕ್ಷೆಯಲ್ಲಿ ಒಂದು ಬಾರಿ ವಯೋಮಿತಿ ಸಡಿಲಿಕೆ ಮತ್ತು ಸೀಟುಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಸರ್ಕಾರ ತೆಗೆದುಕೊಂಡಿರುವ ಮತ್ತೊಂದು ಪ್ರಮುಖ ನಿರ್ಧಾರವಾಗಿದೆ ಎಂದು ಅವರು ಹೇಳಿದರು. ಜಮ್ಮು ಮತ್ತು ಕಾಶ್ಮೀರ ಆಡಳಿತವು ತಳಮಟ್ಟದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಅತ್ಯುತ್ತಮವಾಗಿ ಪ್ರಯತ್ನಿಸುತ್ತಿದೆ ಎಂದು ಸಿನ್ಹಾ ಹೇಳಿದ್ದಾರೆ.
ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು. ಉತ್ತಮ ಆಡಳಿತದ ತತ್ವಗಳನ್ನು ಅನುಷ್ಠಾನಗೊಳಿಸುವುದು. ಜಮ್ಮು ಮತ್ತು ಕಾಶ್ಮೀರದ ಜನರಿಗೆ ಸಾರ್ವಜನಿಕ ಸೇವೆಗಳಲ್ಲಿ ಸುಲಭವಾಗಿ ಪ್ರವೇಶಿಸುವಂತೆ ಮಾಡುವುದು. ಜೊತೆಗೆ ಯುವಕರಿಗೆ ಹೆಚ್ಚಿನ ಜೀವನೋಪಾಯದ ಅವಕಾಶಗಳನ್ನು ಸರ್ಕಾರ ಸೃಷ್ಟಿಸುತ್ತಿದೆ ಎಂದು ಅವರು ತಿಳಿಸಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.