Monday, May 13, 2024
Monday, May 13, 2024

ಶಾಲಾವಲಯ ಘೋಷಣೆ: ಮಕ್ಕಳ ಸುರಕ್ಷೆ ಆದ್ಯತೆ.

Date:

ನವದೆಹಲಿ ಶಾಲೆಗಳ ಸಮೀಪದಲ್ಲಿರುವ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸುರಕ್ಷಿತ ಶಾಲಾ ವಲಯಗಳನ್ನು ಸ್ಥಾಪಿಸಲಾಗಿದೆ. ಈ ಪರಿಕಲ್ಪನೆಯನ್ನು ಬೆಂಗಳೂರು ಸೇರಿದಂತೆ ದೇಶದ ಐದು ನಗರಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ.

ಸುರಕ್ಷಿತ ಶಾಲಾ ವಲಯ ಎಂದು ಗುರುತಿಸಲಾಗದ ಪ್ರದೇಶದಲ್ಲಿ ಶಾಲೆಗಳ ಹತ್ತಿರ ಇರುವ ರಸ್ತೆಗಳಲ್ಲಿ ಸುರಕ್ಷಿತ ಸಂಚಾರಕ್ಕಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಶಾಲಾ ಮಕ್ಕಳು, ಸಿಬ್ಬಂದಿ, ಪಾಲಕರ ಸಂಚಾರ, ಎಲ್ಲ ವಾಹನಗಳ ಸಂಚಾರ ಈ ರಸ್ತೆಗಳಲ್ಲಿ ಹೆಚ್ಚಾಗಿರುವ ಕಾರಣ, ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಾಲೆಗೆ ಸಂಬಂಧಿಸಿದ ಆವರಣದಿಂದ 300 ಅಡಿ ದೂರದವರೆಗೆ ಈ ವಲಯ ವ್ಯಾಪ್ತಿ ಇರುತ್ತದೆ. ಇಲ್ಲಿ ಸಂಚರಿಸುವ ವಾಹನಗಳಿಗೆ ವೇಗದ ಮಿತಿಯನ್ನು ನಿಗದಿ ಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಶಾಲೆ ಆರಂಭಕ್ಕೂ ಮೊದಲೇ ಅಳವಡಿಕೆ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನ ಸೇಂಟ್ ಜೋಸೆಫ್ ಹೈ ಸ್ಕೂಲ್, ಚಾಮರಾಜಪೇಟೆಯಲ್ಲಿರುವ 116 ವರ್ಷಗಳ ಹಳೆಯ ಕೋಟೆ ಹೈಸ್ಕೂಲ್ ಯೋಜನೆಯ ಪ್ರಾಯೋಗಿಕ ಅನುಷ್ಠಾನಕ್ಕೆ ಆಯ್ಕೆಯಾಗಿವೆ.

ಬಹುರಾಷ್ಟ್ರೀಯ ಕಂಪನಿಯಾದ ‘3ಎಂ ಇಂಡಿಯಾ’ದ ಕಾರ್ಯಕ್ರಮವಾದ ” ಯಂಗ್ ಚೇಂಜ್ ಏಜೆಂಟ್ಸ್ ಫಾರ್ ರೋಡ್ ಸೇಫ್ಟಿ” ಹಾಗೂ ಕನ್ಸ ರ್ನ್ ಫಾರ್ ಅಂಡ್ ಪೆಡೆಸ್ಟ್ರಿಯನ್ ಸೇಫ್ಟಿ ಸಹಯೋಗದಲ್ಲಿ, ಬೆಂಗಳೂರಿನ ಸೆಂಟ್ ಜೋಸೆಫ್ ಹೈ ಸ್ಕೂಲ್ ನಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಯಿತು.

ದೆಹಲಿಯ ಮಂದಿರ ಮಾರ್ಗದಲ್ಲಿರುವ ಎನ್. ಪಿ ಬಾಯ್ಸ್ ಸೀನಿಯರ್ ಸೆಕೆಂಡರಿ ಸ್ಕೂಲ್, ಪುಣೆಯ ಜ್ಞಾನ ಪ್ರಮೋಧಿನಿ ಪಾಠಶಾಲೆ, ಗುರು ಗ್ರಾಮದ ಸಿಲ್ವರ್ ಕ್ರೆಸ್ಟ್ ಸ್ಕೂಲ್ ಇನ್ನೂ ಹಲವು ಶಾಲೆಗಳು ಆಯ್ಕೆಯಾಗಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Geetha Shivarajkumar ಬೆಟ್ಟಿಂಗ್ ನಿಷಿದ್ಧ ಆದರೂ ರೈತರೊಬ್ಬರು ಗೀತಾ ಶಿವರಾಜ್ ಕುಮಾರ್ ಗೆಲ್ತಾರೆ ಅಂತ ಬೆಟ್ಟಿಂಗ್ ಮಾತಾಡಿದ್ದಾರೆ

Geetha Shivarajkumar ಶಿವಮೊಗ್ಗ ಲೋಕಸಭಾ ಚುನಾವಣಾ ಯಲ್ಲಿ ಶುರುವಾಯಿತು ಬೆಟ್ಟಿಂಗ್ ಕಾಂಗ್ರೆಸ್...

Shivamogga Death News ಶಿವಮೊಗ್ಗದ ಪ್ರಸಿದ್ಧಹಿರಿಯ ಸಿವಿಲ್ ಇಂಜಿನಿಯರ್ ವಿ.ಟಿ.ಅನಂತಕೃಷ್ಣ ನಿಧನ

Shivamogga Death News ಶಿವಮೊಗ್ಗದ ಹೆಸರಾಂತ ಹಿರಿಯ ಸಿವಿಲ್ ಇಂಜಿನಿಯರ್ ವಿ...

Ayanur Manjunath ಆಯನೂರು ಮಂಜುನಾಥ್ ಗೆ ಬೆಂಬಲ ನೀಡಿ- ಮಧುಬಂಗಾರಪ್ಪ

Ayanur Manjunath 'ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು....

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆ

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆಜಿಲ್ಲಾಡಳಿತ, ಕನ್ನಡ...