Wednesday, October 2, 2024
Wednesday, October 2, 2024

ದೇಶದಾದ್ಯಂತ ಮನೆಗೆಲಸದವರ ಸಮೀಕ್ಷೆ

Date:

ದೇಶದಲ್ಲಿರುವ ಎಲ್ಲಾ ಜಿಲ್ಲೆಗಳಲ್ಲಿ, ಏಕಕಾಲಕ್ಕೆ ಮನೆಗೆಲಸದವರ ಸಮೀಕ್ಷೆ ನಡೆಯಲಿದೆ.

ಅಡುಗೆಯವರು, ಕಾವಲುಗಾರರು, ಸ್ವಚ್ಛತಾ ಸಿಬ್ಬಂದಿಗಳು ಹೀಗೆ ಹಲವಾರು ರೀತಿಯ ಸೇವೆ ಒದಗಿಸುವ ಮನೆಗೆಲಸದವರ ಸಮಸ್ಯೆಯನ್ನು ಅರಿಯಲು ಅಖಿಲ ಭಾರತ ಮಟ್ಟದ ಸಮೀಕ್ಷೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ.

ಕೇಂದ್ರ ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಈ ಸಮೀಕ್ಷೆಗೆ ಚಾಲನೆ ನೀಡಿದ್ದಾರೆ.

ಮನೆಗೆಲಸದವರ ನಿಖರವಾದ ಸಂಖ್ಯೆ ಮತ್ತು ಅನುಪಾತವನ್ನು ಅಂದಾಜು ಮಾಡುವುದು. ವಿವಿಧ ಕುಟುಂಬಗಳಲ್ಲಿ ಇರುವ ಮನೆಗೆಲಸದವರ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಲು ದಾಖಲೆ ಆಧಾರಿತ, ದತ್ತಾಂಶ ಚಾಲಿತ ನೀತಿಗಳನ್ನು ಅರ್ಥ ಮಾಡಿಕೊಳ್ಳಬೇಕು.ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸಮೀಕ್ಷೆ ನಡೆಯಲಿದೆ.
ನಗರೀಕರಣದಿಂದಾಗಿ, ಕಾರ್ಮಿಕರ ವಲಸೆ ಹೆಚ್ಚಾಗಿದೆ. ಮನೆಗೆಲಸ ಆಸಕ್ತಿ ಇರುವ ಕಾರ್ಮಿಕರ ಸಂಖ್ಯೆ ತೀವ್ರ ಹೆಚ್ಚಾಗಿದೆ. ಈ ವಲಯದಲ್ಲಿ ಕೆಲಸ ಮಾಡುವವರ ಸುರಕ್ಷತೆ ಮತ್ತು ಹಕ್ಕು ರಕ್ಷಣೆ ನಿಟ್ಟಿನಲ್ಲಿ ಸೂಕ್ತ ನೀತಿ ರೂಪಿಸಲು ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ಮನೆಗೆಲಸದವರ ರಾಷ್ಟ್ರ ಮಟ್ಟದ ಸಮೀಕ್ಷೆ ಇದೇ ಪ್ರಥಮ ಬಾರಿಗೆ ನಡೆಸಲಾಗುತ್ತಿದೆ. ಈ ವಲಯದಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಸೂಕ್ತ ನೀತಿ ರೂಪಿಸಲಾಗಿದೆ. ಸಮಾಜದಲ್ಲಿನ ಎಲ್ಲಾ ಜನರಿಗೂ ಈ ಸೌಲಭ್ಯ ದೊರೆಯಬೇಕೆಂಬ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ನೆರವು ನೀಡುವ ಈ ಸಮೀಕ್ಷೆಯು ಒಂದು ವರ್ಷದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರದ ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ.

ಇ- ಶ್ರಮ್ ಕೋರ್ಟಿನಲ್ಲಿ ನೋಂದಣಿ ಮಾಡಿಸಿಕೊಂಡಿರುವ ಅಸಂಘಟಿತ ವಲಯದ ಒಟ್ಟು 8.56 ಕೋಟಿ ಕಾರ್ಮಿಕರಿದ್ದಾರೆ. ಇದರಲ್ಲಿ ಶೇ. 8. 8 ರಷ್ಟು ಕಾರ್ಮಿಕರು ಮನೆಗೆಲಸದ ವರ್ಗಕ್ಕೆ ಸೇರಿದ್ದಾರೆ. ಈ ವರ್ಗವು ಕೃಷಿ ಮತ್ತು ನಿರ್ಮಾಣ ವಲಯದ ನಂತರ ಇರುವ ಮೂರನೇ ಅತಿದೊಡ್ಡ ವರ್ಗವಾಗಿದೆ.

ಮನೆಗೆಲಸ ಆರಂಭಿಸಿದಾಗಿನಿಂದ ವಯಸ್ಸು, ಶಿಕ್ಷಣ, ಔದ್ಯೋಗಿಕ ತರಬೇತಿ ,ಕೆಲಸ ಮಾಡಿದ ದಿನಗಳ ಸಂಖ್ಯೆ, ಹಲವಾರು ಮಾಹಿತಿಗಳನ್ನು ಸಮೀಕ್ಷೆಯ ವೇಳೆ ಸಂಗ್ರಹಿಸಲಾಗುತ್ತದೆ ಎಂದು ಕಾರ್ಮಿಕ ಸಚಿವಾಲಯ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....