ತೀರ್ಥಹಳ್ಳಿಯ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಕೃಷಿಕರ ಸೌಹಾರ್ದ ಸಹಕಾರಿಯ ವಾರ್ಷಿಕ ಸಭೆ ನಡೆಯಿತು. ಇದರ ಅಧ್ಯಕ್ಷತೆಯನ್ನು ಮಾನ್ಯ ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಹಿಸಿದ್ದರು.
ರಾಜ್ಯ ಸರ್ಕಾರ ಅಡಿಕೆ ಬೆಳೆಗಾರರ ಹಿತ ಕಾಪಾಡುತ್ತಿದೆ ವೈಜ್ಞಾನಿಕವಾಗಿ ಅಡಿಕೆ ಆರೋಗ್ಯವೃದ್ಧಿಗೆ ಸಹಾಯಕ ಎಂದು ಗೃಹಸಚಿವರ ಜ್ಞಾನೇಂದ್ರ ಅವರು ಅಭಿಪ್ರಾಯಪಟ್ಟಿದ್ದಾರೆ.
ಅಡಿಕೆಗೆ ಇನ್ನಷ್ಟು ಉತ್ತಮ ಭವಿಷ್ಯ ಇದೆ. ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಕೆಲವು ತಿಂಗಳುಗಳಿಂದ ಅಡಿಕೆಗೆ ಮಾರುಕಟ್ಟೆಯಲ್ಲಿ ಉತ್ತಮ ಧಾರಣೆ ದೊರಕಿದೆ. ಮಲೆನಾಡು ಭಾಗದ ಜನರ ಬದುಕು ಅಡಿಕೆ ಧಾರಣೆ ಯಿಂದ ಸುಧಾರಣೆ ಕಂಡಿದೆ. ಅಕಾಲಿಕ ಮಳೆಯಿಂದಾಗಿ ಅಡಿಕೆ ಫಸಲು ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಹೇಳಿದರು.
ಅಡಿಕೆಗೊನೆ ತೆಗೆಯುವ ಫೈಬರ್ ದೋಟಿಗೆ ಸಹಾಯಧನ ನೀಡಲಾಗುತ್ತದೆ. ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ 300 ಕೋಟಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ದೊರಕಿಸಲು ಹೆಚ್ಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸೌಹಾರ್ದ ಸಹಕಾರಿ ನಿರ್ದೇಶಕರು, ಸಿಇಓ ಕವಿತಾ ಜೋಯಿಸ್ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.