ಚೀನಾ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾಗಿದ್ದ ಕರ್ನಲ್ ಬಿಕ್ಕುಮಳ್ಳ ಸಂತೋಷ್ ಬಾಬು ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಹಾವೀರ ಚಕ್ರ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮತ್ತು ದೇಶದ ಉನ್ನತ ಸೇನಾಧಿಕಾರಿಗಳ ಉಪಸ್ಥಿತಿಯಲ್ಲಿ ನವದೆಹಲಿಯಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಂತೋಷ್ ಬಾಬು ಅವರ ಪತ್ನಿ ಬಿ. ಸಂತೋಷಿ ಮತ್ತು ತಾಯಿ ಮಂಜುಳಾ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಂತೋಷ್ ಬಾಬು ಅವರು ಕಳೆದ ವರ್ಷ ಜೂನ್ 15ರಂದು ಪೂರ್ವ ಲಡಾಖ್ ನ ಗಲ್ವಾನ್ ಗಣಿಯಲ್ಲಿ ಚೀನಾ ದಾಳಿಯ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ 16ನೇ ರೆಜಿಮೆಂಟ್ ನ ಕಮಾಂಡಿಂಗ್ ಅಧಿಕಾರಿಯಾಗಿದ್ದರು.
ಪರಮವೀರ ಚಕ್ರದ ನಂತರ ಮಹಾವೀರ ಚಕ್ರವು ಎರಡನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯಾಗಿದೆ.
ಗಲ್ವಾನ್ ಕಣಿವೆಯಲ್ಲಿ ಚೀನಾ ಪಡೆಗಳ ವಿರುದ್ಧ ಯುದ್ಧದಲ್ಲಿ ಹುತಾತ್ಮರಾದ ನುದುರಾಮ್ ಸೊರೆನ್,ಹವಿಲ್ದಾರ್ (ಗನ್ನರ್) ಕೆ.ಪಳನಿ, ನಾಯಕ್ ದೀಪಕ್ ಸಿಂಗ್, ನೈಯಿಬ್ ಸುಬೇದಾರ್, ಮತ್ತು ಸಿಪಾಯಿ ಗುರ್ತೇಜ್ ಸಿಂಗ್ ಅವರಿಗೆ ಮರಣೋತ್ತರವಾಗಿ ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.