ರಾಜ್ಯದೆಲ್ಲೆಡೆ ಎರಡು ವಾರದಿಂದೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಳೆಯಿಂದಾಗಿ ರೈತರು ಬೆಳೆದಂತಹ ಬೆಳೆಗಳೆಲ್ಲ ನೀರು ಪಾಲಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಈ ಪರಿಸ್ಥಿತಿ ಮನಗಂಡು ರಾಜ್ಯ ಕೃಷಿ ಬೆಲೆ ಆಯೋಗವು ಹಲವು ಶಿಫಾರಸ್ಸುಗಳನ್ನು ಮಾಡಿದೆ.
ಎನ್ ಡಿ ಆರ್ ಎಸ್ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಕೃಷಿ ಮತ್ತು ವಾಣಿಜ್ಯ ಬೆಳೆಗಳು/ ಬಹುವಾರ್ಷಿಕ ಬೆಳೆಗಳಿಗೆ ಅನುಗುಣವಾಗಿ ಪ್ರತಿ ಹೆಕ್ಟೇರಿಗೆ 50,000.ರೂ ಹಾಗೂ 1 ಲಕ್ಷ.ರೂ ಪರಿಹಾರ ಧನ ಒದಗಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆ ಅಡಿ ವಾರ್ಷಿಕವಾಗಿ ನೀಡುವ 6,000.ರೂ ಗಳಿಂದ 10,000.ರೂಗಳವರೆಗೆ ಹೆಚ್ಚಿಸಿ ಎರಡು ಕಂತುಗಳಲ್ಲಿ ಖಾತೆಗೆ ವರ್ಗಾಯಿಸುವಂತೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದೆ .
ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ ಮತ್ತು ಮಾರುಕಟ್ಟೆ ಬೆಲೆಗಳ ವಸ್ತುಸ್ಥಿತಿ ಹಾಗೂ ಗ್ರಾಹಕರ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆ ಕುರಿತಂತೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ವರದಿಯ ಶಿಫಾರಸ್ಸುಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.