Tuesday, August 25, 2026
Tuesday, August 25, 2026

ಕೃಷಿ ಬೆಲೆ ಆಯೋಗ ಶಿಫಾರಸು

Date:

ರಾಜ್ಯದೆಲ್ಲೆಡೆ ಎರಡು ವಾರದಿಂದೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಳೆಯಿಂದಾಗಿ ರೈತರು ಬೆಳೆದಂತಹ ಬೆಳೆಗಳೆಲ್ಲ ನೀರು ಪಾಲಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಈ ಪರಿಸ್ಥಿತಿ ಮನಗಂಡು ರಾಜ್ಯ ಕೃಷಿ ಬೆಲೆ ಆಯೋಗವು ಹಲವು ಶಿಫಾರಸ್ಸುಗಳನ್ನು ಮಾಡಿದೆ.

ಎನ್ ಡಿ ಆರ್ ಎಸ್ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಕೃಷಿ ಮತ್ತು ವಾಣಿಜ್ಯ ಬೆಳೆಗಳು/ ಬಹುವಾರ್ಷಿಕ ಬೆಳೆಗಳಿಗೆ ಅನುಗುಣವಾಗಿ ಪ್ರತಿ ಹೆಕ್ಟೇರಿಗೆ 50,000.ರೂ ಹಾಗೂ 1 ಲಕ್ಷ.ರೂ ಪರಿಹಾರ ಧನ ಒದಗಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆ ಅಡಿ ವಾರ್ಷಿಕವಾಗಿ ನೀಡುವ 6,000.ರೂ ಗಳಿಂದ 10,000.ರೂಗಳವರೆಗೆ ಹೆಚ್ಚಿಸಿ ಎರಡು ಕಂತುಗಳಲ್ಲಿ ಖಾತೆಗೆ ವರ್ಗಾಯಿಸುವಂತೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದೆ .

ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ ಮತ್ತು ಮಾರುಕಟ್ಟೆ ಬೆಲೆಗಳ ವಸ್ತುಸ್ಥಿತಿ ಹಾಗೂ ಗ್ರಾಹಕರ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆ ಕುರಿತಂತೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ವರದಿಯ ಶಿಫಾರಸ್ಸುಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...