Tuesday, April 21, 2026
Tuesday, April 21, 2026

ಭಾರತ ಅಂಡರ್ 21 ಹಾಕಿ ವಿಶ್ವಕಪ್

Date:

ಜೂನಿಯರ್ ಹಾಕಿ ವಿಶ್ವಕಪ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಭಾರತ ಮತ್ತು ಫ್ರಾನ್ಸ್ ನಡುವೆ ಪಂದ್ಯ ನಡೆಯಲಿದೆ. ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ಬಯೋಬಬಲ್ ವ್ಯವಸ್ಥೆಯ ಬಿ. ಗುಂಪಿನ ಮೊದಲ ಪಂದ್ಯದಲ್ಲಿ ಭಾರತವು ಪ್ರಾನ್ಸ್ ಎದುರಾಗಲಿದೆ.
ಟೋಕಿಯೋ ಒಲಂಪಿಕ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡದಲ್ಲಿ ಆಡಿದ ವಿವೇಕ ನೇತೃತ್ವದ ತಂಡವು ಇಂದು ಆರಂಭವಾಗಲಿರುವ ಜೂನಿಯರ್ ವಿಶ್ವಕಪ್ ಪಂದ್ಯ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ.
40 ವರ್ಷಗಳ ಹಿಂದೆ ಆರಂಭವಾದ ಟೂರ್ನಿಯಲ್ಲಿ ಫ್ರಾನ್ಸ್ ತಂಡವು 2013 ರಲ್ಲಿ ರನ್ನರ್ ಆಫ್ ಆಗಿತ್ತು. ಭಾರತದ ಎದುರು ಎರಡು ಬಾರಿ ಚಾಂಪಿಯನ್ ಮತ್ತು ಒಂದು ಬಾರಿ ರನ್ನರ್ಸ್ ಆಗಿದೆ. ಜರ್ಮನಿ ಒಟ್ಟು ಆರು ಬಾರಿ ಪ್ರಶಸ್ತಿ ಜೈಯಿಸಿದೆ. ಈ ಬಾರಿ ಡಿ ಗುಂಪಿನಲ್ಲಿ ಆಡಲಿದೆ. ತಲಾ ಒಂದು ಬಾರಿ ಪ್ರಶಸ್ತಿ ಜಯಿಸಿರುವ ಪಾಕಿಸ್ತಾನ ಮತ್ತು ಅರ್ಜೆಂಟೀನಾ ಕೂಡ ಇದೇ ಗುಂಪಿನಲ್ಲಿವೆ.
ಭಾರತ ತಂಡವು ಹಾಲಿ ಚಾಂಪಿಯನ್ ಆಗಿದ್ದು ಟ್ರೋಫಿ ಉಳಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಅನುಭವಿ ಗ್ರಾಹಂ ರೀಡ್ ಮುಖ್ಯ ಕೋಚ್ ಮತ್ತು ಕನ್ನಡಿಗರಾದ ಬಿ.ಜೆ. ಕಾರಿಯಪ್ಪ ಕೋಚ್ ಆಗಿರುವ ತಂಡವು ಆತ್ಮವಿಶ್ವಾಸದ ಆಗಸದಲ್ಲಿದೆ. ಸತತ ಮೂರನೇ ಬಾರಿಗೆ ಭಾರತದಲ್ಲಿ ಈ ಟೂರ್ನಿ ಆಯೋಜನೆ ಆಗುತ್ತಿದೆ.
21 ವರ್ಷದೊಳಗಿನವರ 16 ತಂಡಗಳು ಈ ಟೂರ್ನಿಯಲ್ಲಿ ಪ್ರಶಸ್ತಿಗಾಗಿ ಸೆಣೆಸಲಿವೆ. ಭಾರತ ತಂಡದಲ್ಲಿ 20 ಆಟಗಾರರ ತಂಡವನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ 18 ಆಟಗಾರರು ಫ್ರೆಂಟ್ ಲೈನ್ ನಲ್ಲಿದ್ದಾರೆ. 2 ಬದಲಿ ಆಟಗಾರರಿದ್ದಾರೆ. ಇದು ಪ್ರಶಸ್ತಿ ಉಳಿಸಿಕೊಳ್ಳಲು ಸಾಮರ್ಥ್ಯ ಮತ್ತು ಸಮತೋಲನವಿರುವ ತಂಡವಾಗಿದೆ ಎಂದು ರೀಡ್ ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...