Wednesday, October 2, 2024
Wednesday, October 2, 2024

ಸಾಮೂಹಿಕ ಭೋಜನ : ಕಟ್ಟೆಚ್ಚರ ಮಾರ್ಗಸೂಚಿ

Date:

ಇತ್ತೀಚೆಗಷ್ಟೇ ಶಿವಮೊಗ್ಗ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಸಾಮೂಹಿಕ ಭೋಜನ ಸೇವಿಸಿದ್ದ ಸಾರ್ವಜನಿಕರು ಫುಡ್ ಪಾಯಿಸನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ವರದಿಯಾಗಿತ್ತು. ಈಗ ಈ ಘಟನೆಗೆ ಸಂಬಂಧಿಸಿದಂತೆ ಮಾನ್ಯ ಜಿಲ್ಲಾಧಿಕಾರಿ ಕೆ ಶಿವಕುಮಾರ್ ಅವರು ಸಾಮೂಹಿಕ ಭೋಜನ, ಅನ್ನಸಂತರ್ಪಣೆ, ಜಾತ್ರೆ ಉತ್ಸವದಂತಹ ಸಮಾರಂಭಗಳಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದ್ದಾರೆ.

ಸಾಮೂಹಿಕ ಭೋಜನ ನಡೆಸುವ ಪೂರ್ವದಲ್ಲಿ ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಡುಗೆ ಕೋಣೆಯಲ್ಲಿ ಅಪರಿಚಿತ ಅಥವಾ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿದಂತೆ ಮುಂಜಾಗ್ರತೆ ಕ್ರಮಗಳನ್ನು ವಹಿಸಬೇಕು. ಅಡುಗೆ ಕೋಣೆಯಲ್ಲಿ ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಅಡುಗೆಗೆ ಬಳಸುವ ನೀರು ಶುದ್ಧವಾಗಿರುವುದನ್ನು ಖಾತ್ರಿಪಡಿಸಬೇಕು ಪ್ರತಿ ಎರಡು ತಿಂಗಳಿಗೊಮ್ಮೆ ನೀರನ್ನು ಆರೋಗ್ಯ ಇಲಾಖೆ ಸಹಕಾರದಿಂದ ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದ್ದಾರೆ.

ಅಡುಗೆ ಮಾಡುವವರನ್ನು, ಸಹಾಯಕರನ್ನು, ಬಡಿಸುವವರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಿ ನೇಮಕ ಮಾಡಿಕೊಳ್ಳಬೇಕು. ಕೈಗವಸು/ ತಲೆಗೆ ಟೋಪಿಯನ್ನು ಬಳಸುವುದು ಕಡ್ಡಾಯ. ಪ್ರತಿ ಸಿಬ್ಬಂದಿಯನ್ನು ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಗೆ ಒಳಪಡಿಸುವುದು ಅವರಿಗೆ ಪ್ರತಿ ಆರು ತಿಂಗಳಿಗೊಮ್ಮೆ ಜಂತು ಹುಳು ನಿವಾರಣಾ ಮಾತ್ರ ನೀಡಬೇಕು. ಅಡುಗೆಭಟ್ಟರ ಮತ್ತು ಊಟ ಬಡಿಸುವವರ ಪೂರ್ಣ ವಿಳಾಸ ಮೊಬೈಲ್ ಸಂಖ್ಯೆಯನ್ನು ಕಲ್ಯಾಣ ಮಂಟಪದ ವ್ಯವಸ್ಥಾಪಕರು ಸ್ಥಳೀಯ ಸರ್ಕಾರಿ ವೈದ್ಯಾಧಿಕಾರಿಗಳಿಗೆ ಮೊದಲೇ ನೀಡಿರಬೇಕು.

ಅಡಿಗೆಗೆ ಬಳಸುವ ಪದಾರ್ಥಗಳ ತಯಾರಿಕೆ ದಿನಾಂಕ ಮತ್ತು ಮುಕ್ತಾಯ ದಿನಾಂಕ ಪರಿಶೀಲಿಸಬೇಕು. ಏನಾದರೂ ಅವಘಡ ಸಂಭವಿಸಿದರೆ ಆರೋಗ್ಯ ಅಧಿಕಾರಿಗಳಿಗೆ ನೀಡಬೇಕು. ದಾಸ್ತಾನು ಕೊಠಡಿ ಸ್ವಚ್ಛವಾಗಿರಬೇಕು. ಆಹಾರ ಪದಾರ್ಥಗಳ ಸರಬರಾಜು ಸಂದರ್ಭದಲ್ಲಿ ಕಲಬೆರಿಕೆ ಕಂಡುಬಂದಲ್ಲಿ ಅವುಗಳನ್ನು ಆಹಾರ ಸುರಕ್ಷತಾ ಇಲಾಖೆಯ ಮಾಹಿತಿ ನೀಡಬೇಕು. ಅಡುಗೆ ತಯಾರಿಸಿದ ನಂತರ ಪಾತ್ರೆಗಳಲ್ಲಿ ಹಲ್ಲಿ/ಜಿರಲೆ ಬೀಳದಂತೆ ಸುರಕ್ಷಿತವಾಗಿ ಮುಚ್ಚಿಡಬೇಕು.

ದೇವಸ್ಥಾನ, ಅಂಗನವಾಡಿ, ಶಾಲೆ, ವಸತಿ ಶಾಲೆ, ಹಾಸ್ಟೆಲ್, ಕ್ಯಾಂಟೀನ್, ಕಾರಾಗೃಹ ಮತ್ತು ಆಸ್ಪತ್ರೆ ಕ್ಯಾಂಟೀನ್ ಗಳಲ್ಲಿನ ಅಡುಗೆ ಕೊಠಡಿ ಮತ್ತು ಊಟದ ಕೊಠಡಿಗಳಲ್ಲಿ ಈ ಎಲ್ಲಾ ಅಂಶಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...