Monday, April 6, 2026
Monday, April 6, 2026

ವಾಲ್ಮೀಕಿ ರಾಮಾಯಣದಲ್ಲಿ ಅನುಕರಣೆಯ ಮೌಲ್ಯಗಳಿವೆ

Date:

ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ನಡೆಸಲಾಯಿತು.

“ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ ಸ್ತ್ರೀ ಸಮಾನತೆ, ಸಹೋದರ ಬಾಂಧವ್ಯ, ಅಹಿಂಸಾವಾದ ಹೀಗೆ ಹಲವಾರು ಅನುಕರಣಿಯ ಮೌಲ್ಯಗಳಿವೆ. ಹೀಗಾಗಿಯೇ ರಾಮ ಮತ್ತು ರಾಮಾಯಣ ಭಾರತೀಯರ ಹೃದಯಕ್ಕೆ ಹತ್ತಿರವಾದ ಭಾವನಾತ್ಮಕ ವಿಚಾರ ” ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಜಗತ್ತಿನ ಕಾವ್ಯಪರಂಪರೆಯಲ್ಲಿ ಪ್ರಥಮ ಸ್ಥಾನದಲ್ಲಿ ನಿಲ್ಲುವ ಮಹಾಕಾವ್ಯವನ್ನು ವಾಲ್ಮೀಕಿಯವರು ರಚಿಸಿದ್ದಾರೆ. ಇವರು ಸರ್ವಕಾಲಕ್ಕೂ ಸಲ್ಲುವ ಅನೇಕ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ನಾಗಭೂಷಣ್ ಬಗ್ಗನಡು ಹೇಳಿದರು.

ಮಹರ್ಷಿ ವಾಲ್ಮೀಕಿ ಅವರು ರಾಮನ ಮೇರು ವ್ಯಕ್ತಿತ್ವವನ್ನು ಮತ್ತು ರಾಮಾಯಣದ ಮೂಲಕ ಅವರು ಪ್ರತಿಪಾದಿಸಿದ್ದಾರೆ. ಈ ಮೌಲ್ಯಗಳನ್ನು ಇಂದಿನ ಪೀಳಿಗೆಯವರಿಗೆ ತಲುಪಿಸಬೇಕು. ಈ ದೃಷ್ಟಿಯಿಂದ ಸರ್ಕಾರ ವಾಲ್ಮೀಕಿ ಜಯಂತಿಯ ಆಚರಣೆ ಆರಂಭಿಸಿದೆ. ವಿಶ್ವವಿದ್ಯಾಲಯ ವಾಲ್ಮೀಕಿ ಜಯಂತಿಯನ್ನು ಆಚರಿಸುವುದರ ಜೊತೆಗೆ ವರ್ಷವಿಡಿ ಎಸ್ ಸಿ ಎಸ್ ಟಿ ಘಟಕದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕುಲಸಚಿವೆ ಶ್ರೀಮತಿ ಜಿ. ಅನುರಾಧ ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ಸಿ.ಎಂ. ತ್ಯಾಗರಾಜ, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಘಟಕದ ಸಂಚಾಲಕ ಡಾ. ಉದ್ದಗಟ್ಟಿ ವೆಂಕಟೇಶ್ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...